ಉಳ್ಳಾಲ(ವಿಶ್ವಕನ್ನಡಿಗ ನ್ಯೂಸ್): ಒಮನ್ನಲ್ಲಿ ಸಮುದ್ರಕ್ಕೆ ಸ್ನಾನಕ್ಕಿಳಿದ ಉಳ್ಳಾಲದ ಇಬ್ಬರು ಯುವಕರು ನೀರುಪಾಲಾಗಿ, ಓರ್ವ ಮೃತಪಟ್ಟು, ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿರುವುದು ವರದಿಯಾಗಿದೆ.
ಉಳ್ಳಾಲದ ಅಳೇಕಲ ನಿವಾಸಿ ರಿಝ್ವಾನ್ (25), ಕೋಟೆಪುರ ನಿವಾಸಿ ಝಮೀರ್ (25) ಸಮುದ್ರಪಾಲಾದ ಯುವಕರಾಗಿದ್ದು, ಈ ಪೈಕಿ ಝಮೀರ್ರ ಮೃತದೇಹ ಪತ್ತೆಯಾಗಿದೆ.
ಎರಡು ವರ್ಷಗಳ ಹಿಂದೆ ಉಳ್ಳಾಲದಿಂದ ಒಮನ್ಗೆ ಉದ್ಯೋಗಕ್ಕೆಂದು ತೆರಳಿದ್ದ ಇವರಿಬ್ಬರು ಒಮನ್ನಲ್ಲಿ ಫಿಶ್ಮಿಲ್ ಕಂಪೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಇವರು ಒಮನ್ನ ದುಖ್ಮ್ ಎಂಬ ಕಡಲತೀರಕ್ಕೆ ಶುಕ್ರವಾರ ಸಂಜೆ ವೇಳೆ ವಿಹಾರಕ್ಕೆ ತೆರಳಿದ್ದರೆನ್ನಲಾಗಿದೆ. ಈ ವೇಳೆ ಸಮುದ್ರಕ್ಕಿಳಿದ ರಿಝ್ವಾನ್ ನೀರಿನಲ್ಲಿ ಮುಳುಗಿದ್ದಾರೆ. ಅವರನ್ನು ರಕ್ಷಿಸಲು ಸಮುದ್ರಕ್ಕಿಳಿದ ಝಮೀರ್ ಕೂಡಾ ಮುಳುಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಿಝ್ವಾನ್ ಗಾಗಿ ಹುಡುಕಾಟ ಮುಂದುವರಿದಿದೆ.
ಮೃತ ಝಮೀರ್ಗೆ ಈಗಾಗಲೇ ಮದುವೆ ನಿಶ್ವಯವಾಗಿತ್ತು. ಕೆಲವೇ ದಿನಗಳಲ್ಲಿ ಆತ ತಾಯ್ನಾಡಿಗೆ ಮರಳುವ ಸಿದ್ಧತೆಯಲ್ಲಿದ್ದ ಎಂದು ತಿಳಿದುಬಂದಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.