ಮಂಚಿ (www.vknews.com) : SDPI ಮಂಚಿ ಗ್ರಾಮ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಯನ್ನು ಮಂಚಿ ಗ್ರಾಮ ಪಂಚಾಯತ್ ಮುಂಭಾಗ ದಲ್ಲಿ SDPI ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ನೇತೃತ್ವದಲ್ಲಿ ನಡೆಸಲಾಯಿತು.
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಲಾಯಿತು ಹಾಗೂ ಮಂಚಿ ಪಂಚಾಯತ್ ಮುಂಭಾಗ ದಲ್ಲಿ ಓಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿಲಾಯಿತು.
ಪ್ರತಿಭಟನೆ ಸಭೆಯಲ್ಲಿ SDPI ದ.ಕ ಜಿಲ್ಲಾ ಕಾರ್ಯದರ್ಶಿ ಯಾದ ಆಶ್ರಫ್ ಮಂಚಿ ಮಾತನಾಡಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಹಾಗೂ ತೈಲ ಬೆಲೆ ಏರಿಕೆಗೆ BJP ಖಾಸಗೀಕರಣಕ್ಕೆ ಹೆಚ್ಚು ಹೊತ್ತು ನೀಡುತ್ತಿರುವುದೇ ಮುಖ್ಯ ಕಾರಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ SDPI ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯರಾದ ಫೈಝಲ್ ಮಂಚಿ ಸಾಮಾಜಿಕ ಕಾರ್ಯಕರ್ತ ಹನೀಫ್ ನಿರ್ಬೈಲು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ನಿಸಾರ್ ಕುಕ್ಕಾಜೆ ಸ್ವಾಗತಿಸಿ ನಿರೂಪಿಸಿದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.