ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ಕೋವಿಡ್ ಲಸಿಕೆಯ ಪಡೆದ ಯುವತಿಯೊಬ್ಬಳು ಅಸ್ವಸ್ಥಗೊಂಡು ಸಾವನೊಪ್ಪಿದ ಘಟನೆ ತಾಲೂಕಿನ ಹರ್ಕೂರು ಗ್ರಾಮದಲ್ಲಿ ನಡೆದಿದೆ.ಗುಡಿಮನೆ ನಿವಾಸಿ ಸುಮಾರು 21ಪ್ರಾಯದ ಅಶ್ವಿನಿ ಎಂಬುವರು ಸಾವನೊಪ್ಪಿದ ದುರ್ದೈವಿ . ಘಟನೆ ಹಿನ್ನಲೆ : ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆಯ ಪ್ರಥಮ ಡೋಸನ್ನು ಪಡೆದುಕೊಂಡಿದ್ದರು, ಲಸಿಕೆ ಪಡೆದ ಮರುದಿನ ರಾತ್ರಿ ಅತೀಯಾಗಿ ವಾಂತಿಯಾದುದರಿಂದ ಅಸ್ವಸ್ಥತೆಗೊಂಡ ಅಶ್ವಿನಿಯವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿ ಕಡಿಮೆ ರಕ್ತದೊತ್ತಡ ಎಂಬುದಾಗಿ ತಿಳಿಸಿ ಕೂಡಲೇ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದರು. ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣವನ್ನು ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.