ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ಹಣ್ಣು ಸಾಗಾಟದ ಬೊಲೆರೋ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕ್ಲೀನರ್ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಣೂರು ರಾಜಲಕ್ಷ್ಮಿ ಸಭಾಭವನದ ಎದುರುಗಡೆ ಸೋಮವಾರ ಮುಂಜಾನೆ ನಡೆದಿದೆ.ಮೃತ ವ್ಯಕ್ತಿಯನ್ನು ಮಹಾರಾಷ್ಟ್ರ ಸಾಂಗ್ಲಿಯದ ದಿನೇಶ್ ಚಂದ್ರಶೇಖರ ಮುಂಚಾಂಡಿ (20) ಎಂದು ಗುರುತಿಸಲಾಗಿದೆ.ಬಿಜಾಪುರದಿಂದ ಮಂಗಳೂರು ಸಾಗುತ್ತಿದ್ದ ಬೊಲೆರೋ ಪಿಕಪ್ ವಾಹನವು ಕೋಟ ಮಣೂರು ಸಮೀಪ ಇಂದು ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಾಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಬೊಲೆರೋ ವಾಹನದಲ್ಲಿ ಇದ್ದ ಕ್ಲೀನರ್ ರಸ್ತೆಗೆ ಎಸೆಯಲ್ಪಟ್ಟು ಅವರ ಮೇಲೆ ವಾಹನ ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ .ಕೋಟ ಪೊಲೀಸರು ಪ್ರಕರಣವನ್ನು ;ದಾಖಲಿಸಿ ಕೊಂಡಿದ್ದಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.