ಕೆಜಿಎಫ್(ವಿಶ್ವಕನ್ನಡಿಗ ನ್ಯೂಸ್):- ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿಗೆ ಭಾಜನರಾಗಿದ್ದ ಮೂವರು ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ , ಸರ್ಕಾರದಿಂದ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿ ಪಡೆದಿರುವ ಬಂಗಾರಪೇಟೆ ಪಿಎಸ್ಐ ಎನ್.ಜಿ.ಚೌಡಪ್ಪ , ವನಿತಾ ಸಹಾಯವಾಣಿ ಎಎಸ್ಐ ಎಸ್. ಗಾಯತ್ರಿ ಮತ್ತು ಜಿಲ್ಲಾ ಗುಪ್ತ ವಿಭಾಗದ ಮುಖ್ಯಪೇದೆ ಎಫ್ . ಮರಿಯಾ ಜೋಸೆಫ್ ದಿನೇಶ್ ಕುಮಾರ್ ಅವರುಗಳನ್ನು ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಏರ್ಪಡಿಸಿದ್ದ , ಹಾರ್ಥಿಕ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಅಧ್ಯಕ್ಷತೆ ವಹಿಸಿ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿ ಪಡೆದಿರುವುದಕ್ಕೆ ಅಭಿನಂದಿಸಿ , ಶುಭ ಕೋರಿವರು.
ಸನ್ಮಾನಿತರನ್ನು ಪ್ರತ್ಯೇಕವಾಗಿ ಶಾಲು ಹೊದಿಸಿ ಹಣ್ಣು ಹಂಪಲು ನೀಡಿ ಸನ್ಮಾನಿಸಿ ಪ್ರಮಾಣಪತ್ರ , ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.