ಶ್ರೀನಿವಾಸಪುರ(ವಿಶ್ವ ಕನ್ನಡಿಗ ನ್ಯೂಸ್): ತಾಡಿಗೋಳ್ ಗ್ರಾಮದ ಸಮೀಪ ಸಾರಿಗೆ ಸಂಸ್ಥೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲ್ಲೂಕು ದಲಿತ ಸಾಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬುಧವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ದೌರ್ಜನ್ಯ ಮಾಡಿರುವ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಬಂಧಿಸಿ ರೌಡಿ ಪಟ್ಟಿಗೆ ಸೇರಿಸಿ ಗಡಿಪಾರು ಮಾಡಬೇಕು ಎಂದು ಪ್ರತಿಭಟನಕಾರರು ಘೋಷಣೆ ಕೂಗಿದರು. ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ನೀಡಿದರು.
ವಿವಿಧ ದಲಿತ ಪರ ಸಂಘಟನೆಗಳ ಮುಖಂಡರಾದ ರಾಮಾಂಜಮ್ಮ , ವರ್ತನಹಳ್ಳಿ ವೆಂಕಟೇಶ , ಹೊಲದಲ್ಲಿ ನಾರಾಯಣಸ್ವಾಮಿ , ಕಲ್ಟಿಗಾನಹಳ್ಳಿ ಈರಪ್ಪ , ವಿ.ಆನಂದ್ , ಬಿ ನರಸಿಂಹಪ್ಪ , ಸ.ನಿವೆಂಕಟಪ್ಪ , ನಾರಾಯಣಸ್ವಾಮಿ , ಎ.ಮುನಿಯಪ್ಪು . ಎಂ. ಮಳಗಾಗಿಲಪ್ಪ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.