ಬೆಳ್ಳಾರೆ (www.vknews.com) : ದೆಹಲಿಯ ಸಿವಿಲ್ ಡಿಫೆನ್ಸ್ ಅಧಿಕಾರಿ ಸಾಬಿಯಾ ಸೈಫ್ ಳ ಅಮಾನವೀಯವಾಗಿ ಅತ್ಯಾಚಾರಗೈದು ಮೃಗೀಯವಾಗಿ ಹತ್ಯೆಗೈದ ಪ್ರಕರಣವನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವಲಯ ಸಮಿತಿ ಹಾಗೂ ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ಳಾರೆ ಜಂಟಿ ಆಶ್ರಯದಲ್ಲಿ ಇಂದು ಬೆಳ್ಳಾರೆ ಬಸ್ಸು ತಂಗುದಾಣದ ಬಳಿ ಬ್ರಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರೂ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರೂ ಆದ ಇಕ್ಬಾಲ್ ಬೆಳ್ಳಾರೆ ಮಾತನಾಡಿ ದೇಶದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದ ಪರಿಸ್ತಿತಿ ನಿರ್ಮಾಣವಾಗಿದ್ದು ರಾಷ್ಟ್ರ ರಾಜಧಾನಿಯಲ್ಲಿ ಒಂದು ಮಹಿಳಾ ಪೋಲೀಸ್ ಅಧಿಕಾರಿನಿಯನ್ನು ಕ್ರೂರವಾಗಿ ಅತ್ಯಾಚಾರಗೈದು ಮೃಗೀಯವಾಗಿ ಹತ್ಯೆಮಾಡಲು ಕಿರಾತಕರಿಗೆ ದೈರ್ಯ ಬಂದಿದೆ ಎಂದರೆ ಈ ದೇಶದ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದ ಅವರು ದೇಶದ ಸಾಮಾನ್ಯ ಮಹಿಳೆಯರು ಎಷ್ಟು ಸುರಕ್ಷಿತರಿಂದಿರಬಹುದು ಎಂದು ಪ್ರಶ್ನಿಸಿದರು.
ಸಭೆಯಲ್ಲಿ ವುಮೆನ್ ಇಂಡಿಯಾ ಮೂವ್ಮೆಂಟ್ ದ.ಕ.ಜಿಲ್ಲಾ ಅಧ್ಯಕ್ಷೆ ನಶ್ರಿಯಾ ಬೆಳ್ಳಾರೆ ಮಾತನಾಡಿ ದೇಶದ ಹಲವು ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸರಿಯಾದ ಶಿಕ್ಷೆ ದೊರಕದೇ ಶ್ರೀರಕ್ಷೆ ಸಿಕ್ಕಿದ್ದೇ, ಸಾಬಿಯಾ ಸೈಫ್ ಳಂತಹ ಸಹೋದರಿಗೆ ಈ ರೀತಿ ಅಮಾನವೀಯವಾಗಿ ಅತ್ಯಾಚಾರಗೈದು ಕೊಲೆಗೆಯ್ಯಲ್ಪಡಲು ಕಾರಣ ಎಂದ ಅವರು ಸಾಬಿಯಾ ಸೈಫ್ ರ ಕುಟುಂಬ ಕ್ಕೆ ಸರ್ಕಾರ ತಕ್ಷಣ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಲು ವುಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸುತ್ತದೆ ಎಂದರು.
ಪ್ರತಿಭಟನಾ ಸಭೆ ಯಲ್ಲಿ ಪಾಪ್ಯುಲರ್ ಫ್ರಂಟ್ ರಾಜ್ಯ ಮುಖಂಡ ಶಾಫಿ ಬೆಳ್ಳಾರೆ, ಎಸ್.ಡಿ.ಪಿ.ಐ ಮುಖಂಡರುಗಳಾದ ಹಾಜಿ.ಕೆ.ಮಮ್ಮಾಲಿ, ಬಶೀರ್.ಬಿ.ಎ, ಸವಣೂರು ಗ್ರಾಮ ಪಂಚಾಯತ್ ಸದಸ್ಯ ರಫೀಕ್ ಎಂಎ, ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ವಲಯ ಅಧ್ಯಕ್ಷ ಫಾರೂಕ್ ನಿಂತಿಕಲ್, ಎಸ್.ಡಿ.ಪಿ.ಐ ಬೆಳ್ಳಾರೆ ಗ್ರಾಮ ಸಮಿತಿ ಅಧ್ಯಕ್ಷ ಸಿದ್ದೀಕ್ ಬೆಳ್ಳಾರೆ, ಕಾರ್ಯದರ್ಶಿ ಜಾಬಿರ್, ಆಶಿರ್ ಎ.ಬಿ, ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಯು.ಎಚ್.ಝೈನುದ್ದೀನ್, ರಶೀದ್ ಎಂ.ಆರ್, ಶಫೀಮ್ ಬೆಳ್ಳಾರೆ, ಬಶೀರ್.ಕೆ , ಸದ್ದಾಂ ಪಳ್ಳಿಮಜಲು, ಹಾಗೂ ಮಹಿಳೆಯರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. ಎಸ್.ಡಿ.ಪಿ.ಐ ಬೆಳ್ಳಾರೆ ಗ್ರಾಮ ಸಮಿತಿ ಸದಸ್ಯ ಶಫೀಖ್ ಸ್ವಾಗತಿಸಿ ವಂದಿಸಿದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.