ಕೋಲಾರ(ವಿಶ್ವ ಕನ್ನಡಿಗ ನ್ಯೂಸ್): ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ೨೦೨೦-೨೧ನೇ ಸಾಲಿನ ಸರ್ವ ಸದಸ್ಯರುಗಳ ವಾರ್ಷಿಕ ಮಹಾಸಭೆಯನ್ನು ದಿನಾಂಕ : ೧೪-೦೯-೨೦೨೧ ರಂದು ಮಂಗಳವಾರ ಬೆಳಗ್ಗೆ ೧೦-೩೦ ಗಂಟೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಕೆ.ಎಸ್.ಗಣೇಶ್ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.
ಮಹಾಸಭೆಗೆ ವಿಶೇಷ ಆಹ್ವಾನಿತರಾಗಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾದ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಎ.ಗೋಪಿನಾಥ್ ಆಗಮಿಸಲಿದ್ದಾರೆ.
ಈ ವಾರ್ಷಿಕ ಮಹಾಸಭೆಗೆ ಆಡಳಿತ ಮಂಡಳಿಯ ನಿರ್ದೇಶಕರು, ಸಂಘದ ಎಲ್ಲಾ ಷೇರುದಾರರು ಆಗಮಿಸಿ ಯಶಸ್ವಿಗೊಳಿಸಲು ಸಂಘದ ಕಾರ್ಯದರ್ಶಿ ಬಿ.ಎಸ್.ಗಂಗಾಧರ್ ಕೋರಿದ್ದಾರೆ.ಸಂಘದ ಎಲ್ಲಾ ಷೇರುದಾರರಿಗೆ ಈಗಾಗಲೇ ಅಂಚೆ ಮೂಲಕ ಆಹ್ವಾನ ಪತ್ರಿಕೆಗಳನ್ನು ಕಳುಹಿಸಲಾಗಿದ್ದು,ಯಾರಿಗಾದರೂ ತಲುಪದೇ ಇದ್ದಲ್ಲಿ ಇದನ್ನೇ ವೈಯಕ್ತಿಕ, ಆಹ್ವಾನವೆಂದು ಭಾವಿಸಿ ಸಭೆಗೆ ಆಗಮಿಸಲು ಕೋರಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.