ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) : ಕೋವಿಡ್ ವಾರಿಯರ್ ಆಗಿ ಜೀವದ ಹಂಗು ತೊರೆದು ದುಡಿದವರನ್ನು ಸ್ಮರಿಸುವ ಅಗತ್ಯವಿದೆ , ಅವರ ಸೇವೆಯನ್ನು ಮರೆಯಲಾಗದು ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಅಭಿಪ್ರಾಯಪಟ್ಟರು.
ನಗರದಲ್ಲಿ ಪ್ರಂಟ್ ಲೈನ್ನಲ್ಲಿ ಕೆಲಸ ಮಾಡಿರುವ ಪತ್ರಕರ್ತರು ಸೇರಿದಂತೆ ತಾಲ್ಲೂಕಿನ ೧೮ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ , ನಗರದ ಎಲ್ಲಾ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ತಂಪು ಪಾನೀಯಾ ಹಾಗೂ ಎನ್ -೯೫ ಮಾಸ್ಟ್ಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಇಂತಹ ಒಳ್ಳೆಯ ಕಾರ್ಯವನ್ನು ಪತ್ರಕರ್ತರಿಗೆ ತಂಪುಪಾನೀಯ , ಮಾಸ್ಕ್ ನೀಡುವ ಮೂಲಕವೇ ಆರಂಭಿಸುತ್ತಿರುವುದಾಗಿ ತಿಳಿಸಿದ ಅವರು , ಕೊವಿಡ್ ಸಂದರ್ಭದಲ್ಲಿ ಅನೇಕರು ಸಾವಿನ ಭಯದಿಂದ ಮನೆಯಿಂದ ಹೊರಬರಲು ಹೆದರಿದ್ದನ್ನು ಕಂಡಿದ್ದೇವೆ ಎಂದರು . ಆದರೆ ಪತ್ರಕರ್ತರು , ವೈದ್ಯರು.ಶುಶಕಿಯರು , ಪೂಲೀಸರು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದಾರೆ. ಅವರ ಸೇವೆಯನ್ನು ಮರೆಯುವಂತಿಲ್ಲ ಎಂದು ತಿಳಿಸಿ , ಈ ನಿಟ್ಟಿನಲ್ಲಿ ರೋಟರಿ ಸಂಟ್ಟಲ್ ಅವರ ಸೇವೆಗೆ ಸದಾ ಸಿದ್ಧವಿದೆ ಎಂದು ತಿಳಿಸಿದರು.
ರೋಟರಿ ಸಂಟ್ಟಲ್ ಕಾರ್ಯದರ್ಶಿ ಎಸ್.ಸುಧಾಕರ್ , ಈಗಾಗಲೇ ಕೋವಿಡ್ ಸಂಕಷ್ಟದಲ್ಲಿ ಅನೇಕ ರೀತಿಯಲ್ಲಿ ನಾವು ಕೆಲಸ ಮಾಡಿದ್ದೇವೆ. ಆಮ್ಲಜನಕ ಸಿಗದೇ ಅನೇಕರು ಸಾವನ್ನಪ್ಪಿದ್ದನ್ನು ಮನಗಂಡು ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯಕೇಂದಗಳಿಗೂ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಕೆಲಸ ಮಾಡಿದ್ದೇವೆ ಎಂದರು.
ಶಾಲೆಗಳಲ್ಲಿ ಮಕ್ಕಳಿಗೆ ಮಾಸ್ಕ್ ವಿತರಿಸಲಾಗಿದೆ , ಪರೀಕ್ಷಾ ಸಂದರ್ಭದಲ್ಲೂ ಮಾಸ್ ಒದಗಿಸಲಾಗಿದೆ ಎಂದು ತಿಳಿಸಿ , ಕೋವಿಡ್ ಸಂದರ್ಭದಲ್ಲಿ ರೋಗಿಗಳ ಮನೆಗಳಿಗೆ ಹೋಗಿ ಔಷಧಿ ಕಿಟ್ ನೀಡಿದ ದಿಟ್ಟತನ ನಮ್ಮ ರೋಟರಿ ಅಧ್ಯಕ್ಷರು ಮಾಡಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಸೆಂಟ್ರಲ್ ನಿರ್ದೇಶಕ ಸೋಮಣ್ಣ , ಜಿಲ್ಲಾ ಸೇವಾದಳ ಹಾಗೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ , ಉಪಾಧ್ಯಕ್ಷ ಕೋ.ನಾ.ಮಂಜುನಾಥ್ , ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ . ಮುನಿರಾಜು , ಖಜಾಂಚಿ ಎ.ಜಿ.ಸುರೇಶ್ಕುಮಾರ್ ಮತ್ತಿತರರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.