ಹೊಸಪೇಟೆ(ವಿಶ್ವಕನ್ನಡಿಗ ನ್ಯೂಸ್): ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸ್ ದೌರ್ಜನ್ಯವನ್ನು ಖಂಡಿಸಿ ಹಾಗೂ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಪ್ರತಿಭಟನೆಯನ್ನು ತಡೆಯಲು ಬಂದ ಪೊಲೀಸರ ಮತ್ತು ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಸೋಹೆಲ್ ಪ್ರತಿಭಟನೆಯನ್ನೋದ್ದೇಶಿಸಿ ಮಾತನಾಡಿದರು, ಹಾಗೂ ಜಿಲ್ಲಾ ಕಾರ್ಯದರ್ಶಿ ಫೈಜ್, ಜಿಲ್ಲಾ ಸಮಿತಿ ಸದಸ್ಯರಾದ ಶಶವಲಿ, ಫರ್ದಿನ್, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.