ಕಾಪು,(ವಿಶ್ವ ಕನ್ನಡಿಗ ನ್ಯೂಸ್ ): ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರೊಂದು ಚರಂಡಿಗೆ ಉರುಳಿದ ಘಟನೆ ಕಾಪುವಿನ ಕೊಪ್ಪಲಂಗಡಿಯಲ್ಲಿ ನಡೆದಿದೆ .ಕಾರು ಮಂಗಳೂರು ನಿಂದ ಉಡುಪಿ ಕಡೆಗೆ ಸಾಗುತ್ತಿತ್ತು . ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು .ನಾಲ್ವರಿಗೂ ಗಾಯಗಳಾಗಿದ್ದು ಒರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.ಬೆಂಗಳೂರು ನೋಂದಾಣಿ ಸಂಖ್ಯೆಯ ಹೊಂದಿರುವ ಕಾರು ಇದಾಗಿದ್ದೂ , ಕಾಪುವಿನ ಕೊಪ್ಪಲಂಗಡಿಯಲ್ಲಿ ಕಾರು ಮೋರಿಯೊಂದರ ತಡೆಗೋಡೆಗೆ ಡಿಕ್ಕಿಯಾಗಿ ಚರಂಡಿಗೆ ಉರುಳಿದೆ . ಗಾಯಾಳುಗಳು ಉಡುಪಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಒರ್ವನ ಸ್ಥಿತಿ ಗಂಭೀರವಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.