ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ನಗದು ರಹಿತ ಚಿಕಿತ್ಸೆ ನೀಡುವ ‘ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ‘ ಅನುಷ್ಠಾನಗೊಳಿಸಲು ಆನ್ಲೈನ್ ಲಿಂಕ್ ಬಳಸಿ ನೌಕರರು , ಅಧಿಕಾರಿಗಳ ನಿಖರ ಮಾಹಿತಿಯನ್ನು ಸೆ .೩೦ ರೊಳಗೆ ಆನ್ಲೈನ್ ಮೂಲಕ ಸಲ್ಲಿಸಲು ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮನವಿ ಮಾಡಿದ್ದಾರೆ.
ಈ ಸಂಬಂಧ ನೌಕರರ ಸಂಘದ ಎಲ್ಲಾ ಜಿಲ್ಲಾಧ್ಯಕ್ಷರುಗಳು , ಆನ್ಲೈನ್ ಮೂಲಕ ಮಾಹಿತಿ ಅಪ್ಡೇಟ್ ಮಾಡಲು ಎಲ್ಲಾ ತಾಲ್ಲೂಕು ಅಧ್ಯಕ್ಷರುಗಳಿಗೆ , ಚುನಾಯಿತ ಪದಾಧಿಕಾರಿಗಳು , ನಿರ್ದೇಶಕರಿಗೆ , ನೌಕರರ ಬಂಧುಗಳಿಗೆ ತಿಳಿಸುವಂತೆ ಷಡಕ್ಷರಿ ಅವರು ಕೋರಿದ್ದಾರೆ.
ಕೋಲಾರ ಜಿಲ್ಲಾಧ್ಯಕ್ಷ ಸುರೇಶ್ ಬಾಬು ಮನವಿ
ಈ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಎಲ್ಲಾ ನೌಕರರು ನಿಗಧಿತ ದಿನಾಂಕದೊಳಗೆ ಆನ್ಲೈನ್ ಲಿಂಕ್ ಬಳಸಿ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಿ , ಸರ್ಕಾರ ನೀಡಿರುವ ಈ ಆರೋಗ್ಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮತ್ತು ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಕೆಜಿಐಡಿ ಸಂಖ್ಯೆ ಹೊಂದಿರುವ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರರ ಸಂಘದ ಸದಸ್ಯರಾಗಿರುವ ರಾಜ್ಯ ಸರ್ಕಾರದ ಖಾಯಂ ಸರ್ಕಾರಿ ನೌಕರರು , ಅಧಿಕಾರಿಗಳು ಮಾತ್ರ ಈ ಯೋಜನೆ ವ್ಯಾಪ್ತಿಗೆ ಬರುತ್ತಾರೆ ಎಂದು ಸುರೇಶ್ ಬಾಬು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಆರೋಗ್ಯ ಯೋಜನೆ ಜಾರಿಯಲ್ಲಿರುವುದರಿಂದ ಈ ಇಲಾಖೆಯ ನೌಕರರು , ಅಧಿಕಾರಿಗಳು ಮಾಹಿತಿ ಸಲ್ಲಿಸಲು ಅವಕಾಶ ಇರುವುದಿಲ್ಲ , ಅನುದಾನಿತ ಸಂಸ್ಥೆನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಸ್ಥಳೀಯ ಸಂಸ್ಥೆಗಳ ನೌಕರರು , ಅಧಿಕಾರಿಗಳಿಗೆ ಮಾಹಿತಿ ಸಲ್ಲಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.