(www.vknews.com) : “ಬತ್ತದ ತೊರೆ ಸ್ನೇಹ ಬಳಗ” – ಕಾರಂತಜ್ಜನ ನೆರಳಿನಡಿಯಲ್ಲಿ.. ಎಂಬ ಅಡಿಬರಹದೊಂದಿಗೆ ಹುಟ್ಟಿಕೊಂಡ ಹೊಸ ಸಾಹಿತ್ಯ ಬಳಗವು ಅಕ್ಟೋಬರ್ ಮೊದಲ ವಾರದಲ್ಲಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸಾಹಿತ್ಯಿಕ ಸ್ಪರ್ಧೆಗಳನ್ನು ನಡೆಸಲು ಮುಂದಾಗಿದೆ.
(೧) ದಿನಾಂಕ : ೦೪/೧೦/೨೦೨೧ ಸೋಮವಾರ ಕವನ ರಚನೆ ಹಾಗೂ ಕವನ ವಾಚನ ಸ್ಪರ್ಧೆ (ವಿ.ಸೂ : ವಿಷಯ ನಿಮ್ಮ ಆಯ್ಕೆ. ಸಾಲುಗಳ ಮಿತಿ : ೨೦-೨೪ ಸಾಲುಗಳು. ಮೊಬೈಲ್ ಅಡ್ಡ ಹಿಡಿದು ವೀಡಿಯೋ ಮಾಡಿರಿ. ಸುಮಾರು ಮೂರು ನಿಮಿಷಗಳ ಕಾಲ) (೨) ದಿನಾಂಕ : ೦೫/೧೦/೨೦೨೧ ಮಂಗಳವಾರ “ನಾ ಓದಿದ ಕಾರಂತರ ಕಾದಂಬರಿ.. ವಿಮರ್ಶಾ ಲೇಖನ ಸ್ಪರ್ಧೆ” (ವಿ.ಸೂ : ಪದಗಳ ಮಿತಿ ೧೦೦೦ ಪದಗಳು ಸುಮಾರು ಎರಡು ಪುಟಗಳಷ್ಟು) (೩) ದಿನಾಂಕ : ೦೬/೧೦/೨೦೨೧ ಬುಧವಾರ “ಲಲಿತ ಪ್ರಬಂಧಾ ಸ್ಪರ್ಧೆ” (ವಿ.ಸೂ : ವಿಷಯ ನಿಮ್ಮದೇ ಇರಲಿ. ಪದಗಳ ಮಿತಿ ೧೦೦೦- ೧೫೦೦ (ಸುಮಾರು ಎರಡರಿಂದ ಮೂರು ಪುಟಗಳಷ್ಟು) (೪) ದಿನಾಂಕ : ೦೭/೧೦/೨೦೨೧ ಗುರುವಾರ ನೀವು ಭೇಟಿ ಮಾಡಿದ ಕುತೂಹಲಭರಿತ ಸ್ಥಳದ ಕುರಿತಾದ “ಪ್ರವಾಸ ಕಥನ” (ವಿ.ಸೂ : ಪದಗಳ ಮಿತಿ ೧೦೦೦, ಸುಮಾರು ಎರಡು ಪುಟಗಳಷ್ಟು) (೫) ದಿನಾಂಕ : ೦೮/೧೦/೨೦೨೧ ಶುಕ್ರವಾರ “ಮಕ್ಕಳ ನಾಟಕ ರಚನೆ” (ವಿ.ಸೂ : ವಿಷಯ ನಿಮ್ಮದೇ ಇರಲಿ. ಸುಮಾರು ಎರಡರಿಂದ ಮೂರು ಪುಟಗಳು, ಪಾತ್ರಗಳ ಸಂಖ್ಯೆ ೫-೭) (೬) ದಿನಾಂಕ : ೦೯/೧೦/೨೦೨೧ ಶನಿವಾರ ಚಟುವಟಿಕೆ ವಿಭಾಗದಲ್ಲಿ ಕಾರಂತರ ಭಾವಚಿತ್ರ ಅಥವಾ ಅವರ ಕಾದಂಬರಿಯ ಮುಖಪುಟದ ಚಿತ್ರವನ್ನು ಬಿಡಿಸುವುದು.
ನಿಯಮಗಳು : ೧) ಹಿರಿಯರು , ಕಿರಿಯರು, ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದಾಗಿದೆ. ೨) ಇಮೇಜ್ ಗಳನ್ನು ಸ್ವೀಕರಿಸುವುದಿಲ್ಲ. ೩) ಬರಹಗಳಿಗೆ ಸೂಕ್ತ ಶೀರ್ಷಿಕೆ ನೀಡಬೇಕಾಗಿ ಕೋರಿಕೆ. ೪) ಕೊನೆಯಲ್ಲಿ ನಿಮ್ಮ ಹೆಸರು, ಊರು ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ನಮೂದಿಸಿರಬೇಕು.
ಭಾಗವಹಿಸಿದ ಪ್ರತಿಯೊಬ್ಬರಿಗೂ ಇ-ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಗುವುದು. ಹಾಗೂ ಮೊದಲ ಮೂವರು ವಿಜೇತರಿಗೆ ಪುಸ್ತಕ ಬಹುಮಾನದ ಜೊತೆಗೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ : +91 7795743862
“ಕಾರಂತರ ಜನ್ಮದಿನದ ಅಂಗವಾಗಿ ಸ್ಪರ್ಧೆಗಾಗಿ” ಎಂದು ನಮೂದಿಸಿರಿ.
ನಿಮ್ಮ ಬರಹಗಳನ್ನು ಕಳುಹಿಸಬೇಕಾದ ಇ-ಮೇಲ್ ಐಡಿ : [email protected]
ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರಿಕೆ.
ನಿರ್ವಾಹಕರು ಮತ್ತು ತೀರ್ಪುಗಾರರು ಬತ್ತದ ತೊರೆ ಸ್ನೇಹ ಬಳಗ, ಬೆಂಗಳೂರು
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.