ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಮಾಲೂರು ತಾಲ್ಲೂಕಿನ ಲಕ್ಕೂರು ಗ್ರಾಮದಲ್ಲಿ ವೋಲ್ವೋ ಹಾಗೂ ನಾರಾಯಣ ಹೃದಯಾಲಯದ ಸಹಯೋಗದಲ್ಲಿ ಉಚಿತ ಸಂಚಾರಿ ಲಸಿಕಾ ಅಭಿಯಾನ ಯೋಜನೆಯ ಅಡಿಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತ್ತು.
ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಂಗ್ರೆಸ್ ಮುಖಂಡರಾದ ಮಾಲೂರು ಪ್ರದೀಪ್ ರೆಡ್ಡಿ ರವರು ಮಾತನಾಡಿ “ಗ್ರಾಮೀಣ ಭಾಗದಲ್ಲಿ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರಿಗಾಗಿಯೇ ಈ ಬಸ್ ಗಳನ್ನು ಸಿದ್ದಪಡಿಸಲಾಗಿದೆ. ಇದು ರಾಜ್ಯದಲ್ಲಿಯೆ ಮಾದರಿಯಾಗಿದೆ. ಜನರ ಒಡಾಟ ಕಾರ್ಯ ಚುರುಕುಗೊಂಡ ಪರಿಣಾಮ ಹಳ್ಳಿ ಜನರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಆಸಕ್ತಿ ತೋರಿಸುತ್ತಿಲ್ಲ. ಇಂತಹವರಿಗೆ ಈ ಕೋವಿಡ್ ಲಸಿಕೆ ಸಂಚಾರಿ ಬಸ್ ತುಂಬಾ ಉಪಯೋಗವಾಗಲಿದೆ. ಸಾರ್ವಜನಿಕರ ಮನೆಯ ಬಾಗಿಲಿಗೆ ಲಸಿಕೆ ಕೊಂಡೊಯ್ಯಲಾಗುತ್ತಿದೆ. ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ” ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಮುನಿರತ್ನಮ್ಮ ಸಂದೇಗೌಡ ಮಾತನಾಡಿ “ಗ್ರಾಮೀಣ ಪ್ರದೇಶದಲ್ಲಿ ಸಂಚಾರಿ ವಾಹನದ ಮೂಲಕ ಈ ರೀತಿಯಲ್ಲಿ ಜನರ ಸಮೀಪಕ್ಕೆ ಬಂದು ಲಸಿಕೆ ನೀಡುವ ಮೂಲಕ ಜನರ ಯೋಗಕ್ಷೇಮ, ಉತ್ತಮ ಆರೋಗ್ಯ ಬಯಸುವ ಎಲ್ಲಾರಿಗೂ ನಾವು ಅಭಿನಂದನೆ ಅರ್ಪಿಸುವೆವು, ಇದರ ಸದುಪಯೋಗವನ್ನು ಎಲ್ಲಾರೂ ಪಡೆದುಕೊಳ್ಳಿ ಜನರು ಜಾಗೃತಿಯಿಂದ ಜೀವನ ನಿರ್ವಹಿಸಿ” ಎಂದರು.
ಈ ಸಂದರ್ಭದಲ್ಲಿ ವೋಲ್ವೋ ಕಂಪನಿಯ ಆಡಳಿತ ನಿರ್ದೇಶಕರು, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕೋಡಿಹಳ್ಳಿ ಮಂಜುನಾಥ್, ವಕೀಲರಾದ ಲಕ್ಕೂರು ಸುರೇಶ್ ಬಾಬು, ಉಮೇಶ್, ಅಶೋಕ ವೈನ್ಸ್ ಮಾಲೀಕರಾದ ಸಿ.ಎಂ.ಆರ್ ಪ್ರಸಾದ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಎಲ್.ವಿ.ರಾಜೇಶ್, ಶ್ರೀಮತಿ ವಿಜಯಲಕ್ಷ್ಮೀ ಸಿಂಗ್, ಮೋಹನ್ ಸಿಂಗ್, ಸುಬ್ರಮಣಿ (ಸುಬ್ಬು), ಗ್ರಾಮ ಪಂಚಾಯಿತಿ ಸದಸ್ಯ ಶ್ರೀಧರ್ ರೆಡ್ಡಿ, ಮುಖಂಡರಾದ ನಾರಾಯಣಸ್ವಾಮಿ, ರಾಜು, ಶ್ರೀಮತಿ ಹೇಮಾಲತ, ಲಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.