ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್): ಮಹಾತ್ಮಾ ಗಾಂಧೀಜಿ ಬದುಕು ಮಾದರಿಯಾಗಿದೆ. ಅವರ ಜೀವನ ದರ್ಶನ ಸರ್ವಕಾಲಿಕ ಮೌಲ್ಯ ಪಡೆದಿದೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ , ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಗಾಂಧಿ ಜಯಂತಿ ಸಮಾರಂಭದಲ್ಲಿ ಗಾಂಧೀಜಿ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು , ಇಂದಿನ ಪರಿಸ್ಥಿತಿಯಲ್ಲಿ ಗಾಂಧೀಜಿ ಅವರ ತತ್ವ ಸಿದ್ಧಾಂತ ಪಾಲನೆ ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ದೇಶ ಸೇವೆ ಸ್ಮರಣೀಯ. ಅವರು ಪ್ರತಿಭೆ , ಧೈರ್ಯ ಮತ್ತು ದೂರದೃಷ್ಟಿಗೆ ಹೆಸರಾಗಿದ್ದಾರೆ . ಅವರ ದೇಶ ಸೇವೆಯನ್ನು ಜನರು ಇಂದಿಗೂ ಸ್ಮರಿಸುತ್ತಾರೆ ಎಂದು ಹೇಳಿದರು . ಶಿರಸ್ತೇದಾರ್ ಮನೋಹರ ಮಾನ , ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ , ಶ್ರೀನಿವಾಸಯ್ಯ , ಚಿಕ್ಕನಾರಾಯಣಗೌಡ , ನಿರ್ಮಲ ಪದ ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.