ಶ್ರೀನಿವಾಸಪುರ(ವಿಶ್ವಕನ್ನಡಿಗ ನ್ಯೂಸ್): ರಾಯಲ್ಪಾಡ್ ಸಮೀಪ ಶುಕ್ರವಾರ ರಾತ್ರಿ ಕಾರ್ನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ,ರಾಯಲಾಡ್ ಗಾಮದಿಂದ ಮುದಿಮಡಗು ಗ್ರಾಮಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರನ್ನು ತಡೆದು ೧೦೩.೬ ೮೦ ಲೀಟರ್ ಮದ್ಯವನ್ನು ವಶಪಡಿಸಿಕೊಂಡು , ಆರೋಪಿಯನ್ನು ಬಂಧಿಸಿ , ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ಅಬಕಾರಿ ನಿರೀಕ್ಷಕ ಬಿ.ಎಸ್.ರೂಹಿಕ್ , ಅಲಕಾರಿ ಉಪ ನಿರೀಕ್ಷಕ ಕೆ.ಎಂ.ಕೃಷ್ಣಪ್ಪ , ಸಿಬ್ಬಂದಿ ಕೆ.ಆರ್.ಮಂಜುನಾಥ್ , ರಾಘವೇಂದ್ರ ದಾಳಿಯಲ್ಲಿ ಭಾಗವಹಿಸಿದ್ದರು.
ವರದಿ ಶಬ್ಬೀರ್ ಅಹಮ್ಮದ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.