> ರಾಜ್ಯಧ್ಯಕ್ಷರಾದ ಅಥಾವುಲ್ಲಾ ಪುಂಜಾಲಕಟ್ಟೆ ಅವರಿಂದ NEP ಕುರಿತು ಉಪನ್ಯಾಸ
ಬಂಟ್ವಾಳ (www.vknews.com) : ಹೊಸ ರಾಷ್ಟ್ರೀಯ ಶಿಕ್ಷಣ ನೀತಿ “ಅಂತರಂಗ ಮತ್ತು ಬಹಿರಂಗ ” ಎಂಬ ವಿಷಯದಲ್ಲಿ ಕಾರ್ಯಾಗಾರ ಕಾರ್ಯಕ್ರಮವು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿಯ ವತಿಯಿಂದ ಬಂಟ್ವಾಳದ ಅಲ್ ಖಝಾನ ಸಮುದಾಯ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಇದರ ಅಧ್ಯಕ್ಷರಾದಂತಹ ಅಶ್ಫಾಕ್ ತಲಪಾಡಿ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಮಾತನಾಡಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಕೇಂದ್ರೀಕರಣ, ಕೇಸರೀಕರಣ ಹಾಗೂ ಖಾಸಗೀಕರಣಕ್ಕೆ ಒತ್ತು ನೀಡುವ ಒಂದು ಕರಡು ಪ್ರತಿಯಾಗಿದ್ದು, ದೇಶದ ಭವಿಷ್ಯದ ಮೇಲೆ ತೀವ್ರ ಪರಿಣಾಮ ಬೀರಲಿದ್ದು ಇದರ ವಿರುದ್ಧ ಸಾಕಷ್ಟು ಹೋರಾಟಗಳನ್ನು ಕ್ಯಾಂಪಸ್ ಫ್ರಂಟ್ ನಡೆಸಿದ್ದು ಎಲ್ಲಾ ಜನತೆ ಇದರ ವಿರುದ್ಧ ಹೋರಾಡುವ ಅಗತ್ಯತೆಯಿದೆ ಎಂದು ಹೇಳಿದರು.
ಟಿಪ್ಪು ಸುಲ್ತಾನ್ ಪದವಿ ಕಾಲೇಜು ಉಳ್ಳಾಲ ಇದರ ಪ್ರಾಂಶುಪಾಲರಾದಂತಹ ಅಬ್ದುಲ್ ರಹ್ಮಾನ್ ಮಾತನಾಡಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಕ ಸಮುದಾಯವು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸಲಿದ್ದು, ಇದು ಶಿಕ್ಷಕ ವಿರೋಧಿ ನೀತಿಯಾಗಿದೆ ಎಲ್ಲಾ ಶಿಕ್ಷಕರು ಇದರ ವಿರುದ್ಧ ಧ್ವನಿಯೆತ್ತಬೇಕು ಎಂದು ಹೇಳಿದರು.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಸಲೀಂ ಕುಂಪನಮಜಲು ಹಾಗೂ ಬಂಟ್ವಾಳ ಪುರಸಭಾ ಸದಸ್ಯರಾದ ಮುನಿಷ್ ಅಲಿ ಸಂಧರ್ಭ ಮಾತನಾಡಿದರು.
ಕ್ಯಾಂಪಸ್ ಫ್ರಂಟ್ ಬಂಟ್ವಾಳ ಕಾರ್ಯದರ್ಶಿ ಐಮಾನ್ ಬಂಟ್ವಾಳ, ಉಪಾಧ್ಯಕ್ಷರಾದ ಹಮ್ದಾನ್, ಜೊತೆ ಕಾರ್ಯದರ್ಶಿ ಆಸ್ರೀನಾ, ಸಮಿತಿ ಸದಸ್ಯರಾದ ರಿಫಾಝ್, ಹಫಾಝ್, ಫಾರೂಕ್, ಸಿನಾನ್, ಹಾಶಿಮ್, ನಿಯಾಝ್ ಹಾಗೂ ಮತ್ತಿತರು ಉಪಸ್ಥಿತರಿದ್ದರು. ಸಫ್ವಾನ್ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು ಮತ್ತು ಶಹೀಮ್ ತುಂಬೆ ವಂದಿಸಿದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ – ಬಂಟ್ವಾಳ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.