ಕುಂಬಳೆ (ವಿಶ್ವ ಕನ್ನಡಿಗ ನ್ಯೂಸ್) : ಕೋಳಿ ಅಂಕದಲ್ಲಿ ನಡೆದ ಮಾತಿನ ಚಕಮಕಿ ತಾರಕಕ್ಕೇರಿ ಯುವಕನೋರ್ವ ಆರು ಮಂದಿಗೆ ಚೂರಿಯಿಂದ ಇರಿದ ಘಟನೆ ಬಂಬ್ರಾಣದಲ್ಲಿ ನಡೆದಿದೆ.
ಇರಿತಕೊಳ್ಳಗಾದವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಿರಣ್ (29), ಗುರುರಾಜ್(23), ನವೀನ್(22), ಧೀರಜ್ (21), ಪ್ರವೀಣ್ (21) ಮತ್ತು ಚರಣ್ (23) ಇರಿತಕ್ಕೊಳಗಾದವರಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕುಂಬಳೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.