ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಯುವತಿಯರು ಅನ್ಯಧರ್ಮದ ಯುವಕರ ಜೊತೆ ಓಡಾಡುತ್ತಿರುವುದನ್ನು ಪತ್ತೆ ಹಚ್ಚಿ ದಾಳಿ ಮಾಡುತ್ತಿರುವ ಭಜರಂಗದಳದ ಕಾರ್ಯವನ್ನು ಮಂಗಳೂರಿನ ಮಾಜಿ ಕಾರ್ಪೊರೇಟರ್, ಕೆಪಿಸಿಸಿ ಸಮನ್ವಯಕಾರೆ ಪ್ರತಿಭಾ ಕುಳಾಯಿ ಮುಕ್ತಕಂಠದಿಂದ ಹೊಗಳಿದ್ದಾರೆ.
ಇತ್ತೀಚಿಗೆ ಗುರುಪುರ ಸಮೀಪದ ಚಿಲಿಂಬಿಗುಡ್ಡೆಯಲ್ಲಿ ಇಬ್ಬರು ಯುವಕರೊಂದಿಗೆ, ಓರ್ವ ಅಪ್ರಾಪ್ತೆ ಮತ್ತು ಯುವತಿ ಇರುವುದನ್ನು ಗಮನಿಸಿದ ಭಜರಂಗದಳದ ಕಾರ್ಯಕರ್ತರು ಬಜಪೆ ಠಾಣಾ ಪೊಲೀಸರಿಗೆ ಮಾಹಿತಿ ನೀಡಿ ಜೋಡಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು.
ಈ ವಿಚಾರದ ಬಗ್ಗೆ ಮಂಗಳೂರಿನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ, ಯುವತಿ ಮತ್ತು ಅಪ್ರಾಪ್ತ ಬಾಲಕಿಯ ರಕ್ಷಣೆ ಮಾಡಿದ ಭಜರಂಗದಳ ಕಾರ್ಯಕರ್ತರ ಕೆಲಸವನ್ನು ಕೊಂಡಾಡಿದ್ದಾರೆ. “ಕಾನೂನು ಕೈಗೆ ತೆಗೆದುಕೊಳ್ಳದೇ ಪೊಲೀಸರಿಗೆ ಒಪ್ಪಿಸುವ ಮೂಲಕ ಭಜರಂಗದಳದ ಕಾರ್ಯಕರ್ತರು ಅಭಿನಂದನೀಯ ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.