ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್): ಎಲ್ಲ ಇಲಾಖೆಗಳ ಮುಖ್ಯಸ್ಥರು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ತಪ್ಪದೆ ಆಚರಿಸುವುದರ ಮೂಲಕ ಯಶಸ್ವಿಗೊಳಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.
ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಕೀಲರ ಸಭೆಯಲ್ಲಿ ಮಾತನಾಡಿ , ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಆಜಾದಿ ಕಾ ಅಮೃತ ಮಹೋತ್ಸವ ೭೫ ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅ .೧೦ ರಿಂದ ಅ .೧೭ ರ ವರೆಗೆ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ಪಡೆದ ಸವಿಯ ಸಂಭ್ರಮಾಚರಣೆ ಹೆಮ್ಮೆಯ ವಿಷಯವಾಗಿದೆ. ಅಮೃತ ಮಹೋತ್ಸವಕ್ಕೆ ತನ್ನದೇ ಆದ ಮಹತ್ವವಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ರಾಷ್ಟ್ರ ಪ್ರೇಮದ ಸಂಕೇತವಾಗಿದೆ ಎಂದು ಹೇಳಿದರು.
ಶಿರಸೇರ್ದಾ ಮನೋಹರ ಮಾನೆ , ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ , ಪುರಸಭೆ ಮುಖ್ಯಾಧಿಕಾರಿ ವೈ.ಆರ್. ಸತ್ಯನಾರಾಯಣ , ಪೊಲೀಸ್ ಇನ್ಸ್ಪೆಕ್ಟರ್ ಸಿ. ರವಿಕುಮಾರ್ , ಸಮಾಜ ಕಲ್ಯಾಣ ಇಲಾಖೆಯ ರಾಜೇಶ್ , ಸುರೇಶ್ , ಬಿಆರ್ಸಿ ಹನುಮೇಗೌಡ , ನವೀನ್ ಹಾಜರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.