ದೊಡ್ಡಬಳ್ಳಾಪುರ (www.vknews.com) : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ತಪಸೀಹಳ್ಳಿ ಗೇಟ್ ಬಳಿ ನಡೆದಿದೆ.
ಬಿಹಾರ ಮೂಲದ ಅನಿಲ್ ಪಾಸ್ವಾನ್ (41), ದಿನೇಶ್ (35) ಮೃತರು. ಅಪಘಾತದ ಬಳಿಕ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಅನಿಲ್ ಹಾಗೂ ದಿನೇಶ್ ಹುಣಸಮಾರನಹಳ್ಳಿಯಲ್ಲಿ ನೆಲೆಸಿದ್ದು ಟೈಲ್ಸ್ ಕೆಲಸ ಮಾಡುತ್ತಿದ್ದರು. ಭಾನುವಾರ ಗೌರಿಬಿದನೂರಿಗೆ ಕೆಲಸಕ್ಕೆಂದು ಹೋಗಿದ್ದು, ಒಂದೇ ಬೈಕ್ನಲ್ಲಿ ವಾಪಸ್ ಬರುತ್ತಿದ್ದರು. ರಾತ್ರಿ 10.45ರ ಸುಮಾರಿಗೆ ತಪಸೀಹಳ್ಳಿ ಗೇಟ್ ಬಳಿ ದೊಡ್ಡಬಳ್ಳಾಪುರ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತ ದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.