ಉಪ್ಪಿನಂಗಡಿ (www.vknews.com) : ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಕೆಎಸ್ಸಾರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗು ಮೃತಪಟ್ಟ ಘಟನೆ ನಡೆದಿದೆ.
ತಾಯಿ ಮಗು ರಸ್ತೆ ದಾಟುತ್ತಿದ್ದಾಗ ದಿಡೀರನೆ ವೇಗದಿಂದ ಬಂದ ಬಸ್ ತಾಯಿ ಮಗುವಿಗೆ ಡಿಕ್ಕಿ ಹೊಡೆದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಸ್ ಚಾಲಕನನ್ನು ಬಂಧಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಸಿದ್ದೀಕ್ ಎಂಬವರ ಪತ್ನಿ 25 ವರ್ಷ ವಯಸ್ಸಿನ ಶಾಹಿದಾ ಹಾಗೂ ಒಂದು ವರ್ಷ ವಯಸ್ಸಿನ ಮಗ ಶಾಹಿಲ್ ಮೃತಪಟ್ಟವರು ಎಂದು ತಿಳಿದು ಬಂದಿದೆ.
ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಬಸ್ಸಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್ ಗಳ ನಡುವಿನ ಪೈಪೋಟಿಯಿಂದ ಇಂತಹ ಘಟನೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಬಂದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.