ದುಬೈ (ವಿಶ್ವ ಕನ್ನಡಿಗ ನ್ಯೂಸ್) : ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2021ರ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಸಭೆಯಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಲು ಭಾರತದ ಮಾಜಿ ನಾಯಕ, ಕನ್ನಡಿಗ ರಾಹುಲ್ ದ್ರಾವಿಡ್ ಒಪ್ಪಿಗೆ ನೀಡಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ ಶಾ ಟೀಮ್ ಇಂಡಿಯಾಕ್ಕೆ ಕೋಚ್ ಆಗುವಂತೆ ರಾಹುಲ್ ದ್ರಾವಿಡ್ ಅವರಲ್ಲಿ ಕೋರಿಕೊಂಡಿದ್ದಾರೆ. ಬಿಸಿಸಿಐ ಕೋರಿಕೆಗೆ ದ್ರಾವಿಡ್ ಸಮ್ಮತಿಸಿದ್ದಾರೆ. ಯುಎಇ ಮತ್ತು ಓಮನ್ನಲ್ಲಿ ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೆ ನಡೆಯಲಿರುವ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ದ್ರಾವಿಡ್ ಭಾರತ ಮುಖ್ಯ ಕೋಚ್ ಜವಾಬ್ದಾರಿ ಹೊರಲಿದ್ದಾರೆ. ಈಗ ಮುಖ್ಯ ಕೋಚ್ ಆಗಿರುವ ಭಾರತದ ಮಾಜಿ ಬ್ಯಾಟ್ಸ್ಮನ್ ರವಿ ಶಾಸ್ತ್ರಿ ಅವರ ಒಪ್ಪಂದ ಟಿ20 ವಿಶ್ವಕಪ್ ಬಳಿಕ ಮುಕ್ತಾಯವಾಗಲಿದೆ. ಅವರ ಜಾಗಕ್ಕೆ ದ್ರಾವಿಡ್ ಬರಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.