ಸಕಲೇಶಪುರ (www.vknews.com) : ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ನಲ್ಲಿ ಕಳೆದ ರಾತ್ರಿ ಸಿಮೆಂಟ್ ಚೀಲ ತುಂಬಿದ ಲಾರಿಯೊಂದು ಅಪಘಾತಕ್ಕಿಡಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿಗೂ ಕೆಂಪು ಹೊಳೆ ಡ್ಯಾಮ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಗುದಿದ್ದ ಪರಿಣಾಮ ಕೊರಟಗೆರೆ ಮೂಲದ ಚಾಲಕ ಮಂಜುನಾಥ(36)ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಲಾರಿಯ ಕ್ಲೀನರ್ ವೆಂಕಟೇಶ್ (34) ನ ಎರಡು ಕಾಲುಗಳ ಮೂಳೆ ಮುರಿದಿದ್ದು ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಚಾಲಕನ ಬದಿಯು ಮಣ್ಣಿನೊಳಗೆ ಸಿಲುಕಿಕೊಂಡ ಪರಿಣಾಮ ಚಾಲಕ ಹೊರಬರಲಾಗದೆ ಸಾವನ್ನಪ್ಪಿದ್ದು ಚಾಲಕನ ಕೈ ಮಾತ್ರ ಮೇಲೆದ್ದು ಕಾಣುತ್ತಿದ್ದ ದೃಶ್ಯವು ಮನಕಲಕುವಂತಿತ್ತು. ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪಿಎಸ್ಐ ಬಸವರಾಜ್ ಭೇಟಿ ನೀಡಿದ್ದರು. ಚಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಫರ್ಡ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.