ಕೋಲಾರ (ವಿಶ್ವ ಕನ್ನಡಿಗ ನ್ಯೂಸ್); ನಗರದಲ್ಲಿ ಪಾದಚಾರಿಗಳ ಅನುಕೂಲಕ್ಕಾಗಿ ನಗರದಲ್ಲಿ ನಿರ್ಮಿಸಿರುವ ಫುಟ್ಪಾತ್ಗಳನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿ ಜಿಲ್ಲಾ ಕೇಂದ್ರವಾದ ಕೋಲಾರ ನಗರದ ಅಭಿವೃದ್ಧಿಗೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಮಾನ ಮನಸ್ಕರರ ವೇದಿಕೆಯಿಂದ ಸೋಮವಾರ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಲಾಯಿತು .
ನಿಯೋಗದ ನೇತೃತ್ವ ವಹಿಸಿದ್ದ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಓಂಶಕ್ತಿ ಚಲಪತಿ ಅವರು ಮಾತನಾಡಿ , ಬಡವರಿಗೆ ತೊಂದರೆ ನೀಡುವುದು ವೇದಿಕೆಯ ಉದ್ದೇಶವಲ್ಲ , ಪಾದಚಾರಿಗಳಿಗಾಗಿ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ಘುಟ್ ಪಾತ್ ಒತ್ತುವರಿ ತೆರವು ಮಾಡಿಸಬೇಕೆಂದು ಒತ್ತಾಯಿಸಿದರು .
ನಗರಸಭೆ , ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಡ ವ್ಯಾಪಾರಿಗಳಿಗೆ ಫುಟ್ ಪಾತ್ ಹೊರತುಪಡಿಸಿ ಸೂಕ್ತವಾದ ಜಾಗದಲ್ಲಿ ವ್ಯಾಪಾರ ಮಾಡಲು ಜಾಗ ಗುರುತಿಸುವಂತೆ ಮನ್ವಂತರ ಪ್ರಕಾಶನದ ಹಿರಿಯ ಸಂಘಟನಾ ಕಾರ್ಯದರ್ಶಿ ಎಸ್.ಮಂಜುನಾಥ್ , ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ತಿಳಿಸಿದರೆ.
ಹಳೆ ಬಸ್ ನಿಲ್ದಾಣದಲ್ಲಿ ತಳ್ಳುವ ಗಾಡಿಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡಲು ಅವಕಾಶ ಕಲ್ಪಿಸುವಂತೆ ಹಾಗೂ ಹೊಸ ಬಸ್ ನಿಲ್ದಾಣ ಹಿಂಭಾಗ ಇರುವ ಸರ್ವೆ ನಂ .೮೧ ರ ನಿವೇಶನ ಹಾಗೂ ಎಂ.ಬಿ.ರಸ್ತೆಗೆ ಹೊಂದಿಕೊಂಡಿರುವ ಸಂತೆ ಮೈದಾನದಲ್ಲಿ ಬೆಳಿಗ್ಗೆ ೬ ರಿಂದ ೧೧ ಗಂಟೆವರೆಗೆ ತರಕಾರಿ ವ್ಯಾಪಾರ ನಡೆದು ನಂತರ ಖಾಲಿಯಾಗುವ ಜಾಗದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳಾವಕಾಶ ಮಾಡಿಕೊಡುವಂತೆ ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ , ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ತ್ಯಾಗರಾಜ್ ಕೋರಿದರು .
ನಗರದಲ್ಲಿ ರಸ್ತೆಗಳು ಹಾಳಾಗಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಆದೇಶ ನೀಡಿ ಶೀಘ್ರ ದುರಸ್ತಿ ಕಾರ್ಯ ಮುಗಿಸುವಂತೆ ಸೂಚಿಸಬೇಕೆಂದು ಸಮಾನ ಮನಸ್ಕರರ ವೇದಿಕೆಯ ಹಿರಿಯ ಮುಖಂಡರಾದ ಹೊಳಲಿ ಪ್ರಕಾಶ್ ಆಗಹಿಸಿದರು . ರೈತ ಸಂಘದ ಮುಖಂಡರಾದ ರಾಮು ಶಿವಣ್ಣ , ಬಿಜೆಪಿ ನಾಮಾಲ ಮಂಜು , ನೀರಾವರಿ ಹೋರಾಟ ಸಮಿತಿಯ ಚಿನ್ನಿ ಶ್ರೀನಿವಾಸ್ , ಸುದೀರ್ , ಕನ್ನಡ ಪಕ್ಷದ ಹಿರಿಯ ಮುಖಂಡ ಅ.ಕೃ.ಸೋಮಶೇಖರ್ , ರೆಡ್ ಕ್ರಾಸ್ ಸಂಸ್ಥೆಯ ವೆಂಕಟಕೃಷ್ಣ , ಕುರುಬ ಸಮಾಜದ ಮುಖಂಡ ಮುನಿರಾಜು ಇನ್ನಿತರರು ಕೋಲಾದಲ್ಲಿ ಹೆಚ್ಚುತ್ತಿರುವ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ತಿಳಿಸಿದರು .
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಫುಟ್ ಪಾತ್ ತೆರವು ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ , ಪ್ರತಿವಾರ ಕಾರ್ಯಾಚರಣೆಯ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವೆ , ಜನ ಮತ್ತು ಸ್ಥಳೀಯ ಮುಖಂಡರು ಬೀದಿ ಬದಿ ವ್ಯಾಪಾರಿಗಳ ಪರ ಒತ್ತಡ ಹೇರದೆ ಕಾನೂನು ಪಾಲನೆಗೆ ಸಹಕರಿಸಬೇಕೆಂದರು. ರಸ್ತೆಗಳನ್ನು ಕಾಲಮಿತಿಯಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಗುತ್ತಿಗೆದಾರರು ಸಹಕರಿಸುತ್ತಿಲ್ಲ , ಕಸ ವಿಲೇವಾರಿಗೆ ನಗರಸಭೆಗೆ ಕೆಂದಟ್ಟಿ ಬಳಿ ೧೦ ಎಕರೆ ಭೂಮಿ ನೀಡಲಾಗಿದೆ , ವೈಜ್ಞಾನಿಕವಾಗಿ ಕಸ ವಿಲೇವಾರಿ ಆದಲ್ಲಿ ಮಾತ್ರ ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಾಧ್ಯವಾಗುತ್ತದೆ ಎ ೦ ದು ತಿಳಿಸಿದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.