ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):- ಮಾಲೂರಿನ ಸಮಾಜ ಸೇವಕ ಜೆ.ಡಿ.ಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ರವರಿಂದ ಈದ್ ಮಿಲಾದ್ ಹಬ್ಬಕ್ಕೆ ಶುಭಾಶಯ ಸಮರ್ಪಣೆ… ಮುಸ್ಲಿಂ ಧರ್ಮೀಯರ ಪವಿತ್ರ ಆಚರಣೆಗಳಲ್ಲಿ ಒಂದು. ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಆಚರಣೆ ಶುಭ ಸಂದರ್ಭವಿದು. ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಪ್ರತಿ ಮುಸ್ಲಿಂ ಧರ್ಮೀಯರು ವಿಶ್ವದಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರುತ್ತಾರೆ. ಇಸ್ಲಾಮಿಕ್ ಕ್ಯಾಲೆಂಡರಿನ ರಬೀ ವುಲ್ ಅವ್ವಲ್ ಎಂಬ ತಿಂಗಳಿನಲ್ಲಿ ಈದ್ ಮಿಲಾದ್ ಆಚರಿಸಲಾಗುತ್ತದೆ.
ಈದ್ ಮಿಲಾದ್ ಸಮಸ್ತ ಮುಸ್ಲಿಂ ಸಮುದಾಯದ ಜನರಿಗೆ ಒಳಿತು ಮಾಡಲಿ ಎಂದು ಶುಭಾಶಯ ಅರ್ಪಿಸುವೆ.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.