ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದ ಸಾಂಸ್ಕೃತಿಕ ಲೋಕದ ನಾದಸ್ವರ ವಿದ್ವಾನ್, ಶ್ರೀ ತ್ಯಾಗರಾಜು ರವರಿಗೆ ನಾದಸ್ವರ ಕ್ಷೇತ್ರದ ಸಾಧನೆಗಾಗಿ ಸಂದ ರಾಜ್ಯೋತ್ಸವ ಪ್ರಶಸ್ತಿಗಾಗಿ ಮಾಲೂರಿನ ಸಮಾಜಸೇವಕ, ಜೆ.ಡಿ.ಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ರವರು ಮಾಸ್ತಿ ತಮ್ಮ ಸ್ವಗೃಹಕ್ಕೆ ತೆರಳಿ ಸನ್ಮಾನಿಸಿ, ಅಭಿನಂದನೆ ಅರ್ಪಿಸಿ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಮಾಲೂರು ತಾಲ್ಲೂಕು ಜೆ.ಡಿ.ಎಸ್ ಘಟಕದ ಅಧ್ಯಕ್ಷರಾದ ಎಚ್.ವಿ.ಚಂದ್ರಶೇಖರ್ ಗೌಡ, ಜೆ.ಡಿ.ಎಸ್ ರಾಜ್ಯ ಸಮಿತಿ ಸದಸ್ಯ ಬಲ್ಲಹಳ್ಳಿ ನಾರಾಯಣಸ್ವಾಮಿ, ವಕೀಲರಾದ ಆನಂದ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಮಸ್ವಾಮಿ ರೆಡ್ಡಿ, ಯುವ ಮುಖಂಡ ಸಂದೀಪ್, ಹಾಗೂ ಅನೇಕ ಜೆ.ಡಿ.ಎಸ್ ಮುಖಂಡರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.