ದಿಲ್ಲಿ(ವಿಶ್ವಕನ್ನಡಿಗ ನ್ಯೂಸ್): ಭಾರತ ಸರಕಾರ ನೀಡುವ ದೇಶದ ನಾಲ್ಕನೇ ಅತೀದೊಡ್ಡ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಿಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ಕಟ್ಟಿಸಿ ನೂರಾರು ಮಕ್ಕಳಿಗೆ ವಿದ್ಯಾರ್ಜನೆಗೆ ಅವಕಾಶ ಮಾಡಿಕೊಟ್ಟ ಇವರಿಗೆ 2020 ರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಕೋವಿಡ್ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ತಡವಾಗಿ ಇಂದು ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಹಲವು ಗಣ್ಯರು ಉಪಸ್ತಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.