ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
ಕರ್ನಾಟಕ ರಾಜ್ಯದಲ್ಲಿ ಪ್ರಸಿದ್ದಿ ಪಡೆದಿರುವ ಶ್ರೀ ಪ್ರಸನ್ನ ವೆಂಕಟರಾಮಣಸ್ವಾಮಿ ದೇವಾಲಯ ಇರುವ ಪ್ರಮುಖ ಯಾತ್ರಾ ಸ್ಥಳ ಚಿಕ್ಕತಿರುಪತಿಯ ಹೃದಯ ಭಾಗದ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು, ದೊಡ್ಡ ದೊಡ್ಡ ಹಳ್ಳ-ಕೊಳ್ಳಗಳಿಂದ ಕೂಡಿದ್ದು, ಪ್ರತಿನಿತ್ಯ ದೇವಾಲಯದ ದರ್ಶನಕ್ಕೆ ಬರುವ ಭಕ್ತಾಧಿಗಳು, ಗ್ರಾಮಸ್ಥರು, ವಿದ್ಯಾರ್ಥಿಗಳು, ವಾಹನ ಸವಾರರು ನರಕಯಾತನೆ ಅನುಭವಿಸುವಂತಾಗಿದೆ.
ಈ ಪ್ರಮುಖ ರಸ್ತೆಯಲ್ಲಿ ಅನೇಕ ಕಲ್ಯಾಣ ಮಂಟಪ್ಪಗಳು, ಸರ್ಕಾರಿ ಶಾಲೆ, ಬ್ಯಾಂಕ್, ವ್ಯಾಪಾರ ವಹಿವಾಟು ನಡೆಯುವ ಪ್ರಮುಖ ರಸ್ತೆ ಇದಾಗಿದೆ. ಪ್ರತಿನಿತ್ಯ ಒಂದಲ್ಲಾ ಒಂದು ಅಪಘೌತಗಳು ಸಂಭವಿಸುವ ಮೂಲಕ ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ.
ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಸಚಿವರು, ಸಂಸದರು, ಶಾಸಕರು, ಎಚ್ಚೆತ್ತು ಈ ಕೂಡಲೇ ರಸ್ತೆಪಡಿಸಿ, ಡಾಂಬರು ಹಾಕುವ ಮೂಲಕ ಸಹಕರಿಸಬೇಕೆಂದು ಚಿಕ್ಕತಿರುಪತಿ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.