ಕೋಲಾರ (ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು. ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಎಲ್ಲಾ ಅಧಿಕಾರಿಗಳು ತಿಳಿದುಕೊಳ್ಳಬೇಕು. ಚುನಾವಣೆ ಸಮಯದಲ್ಲಿ ಅಧಿಕಾರಿಗಳು ತುಂಬಾ ಜಾಗೃತಿ ವಹಿಸಬೇಕು. ಯಾವುದೇ ರೀತಿ ತೊಂದರೆಗಳಾದಲ್ಲಿ ಚುನಾವಣಾ ಸಮಿತಿಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಚುನಾವಣಾ ಸಂಧರ್ಭದಲ್ಲಿ ಪ್ರಚಾರಕ್ಕಾಗಿ ಹಣ , ಮಧ್ಯ ಹಾಗೂ ವಸ್ತುಗಳನ್ನು ಹಂಚಲು ಬಳಸುತ್ತಾರೆ ಎಂಬ ದೂರುಗಳಿವೆ. ಮಧ್ಯವನ್ನು ದಸ್ತಾನು ಮಾಡುವುದು , ಸರಬರಾಜು ಮಾಡುವುದು ಹಾಗೂ ಹಂಚಿಕೆ ಮಾಡುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು . ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ದ ಪ್ರಕರಣ ದಾಖಲಾಯಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹಣ ಹಂಚುವುದು , ದಸ್ತಾನು ಮಾಡುವುದು ಹಾಗೂ ಸರಬರಾಜು ಮಾಡುವುದರ ಬಗ್ಗೆ ದೂರುಗಳು ಬಂದಲ್ಲಿ ತಕ್ಷಣ ಪರಿಶೀಲನೆ ಮಾಡಬೇಕು. 10 ಲಕ್ಷಕ್ಕಿಂತ ಕಡಿಮೆ ಇರುವ ಹಣ ಸಿಕ್ಕಿದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಿತಿ ಕ್ರಮಕ್ಕೆ ವಹಿಸಬೇಕು , ಸಮಿತಿಯು ಪರಿಶೀಲನೆ ನಡೆಸಿ ಹಣದ ಬಗ್ಗೆ ಕ್ರಮ ಕೈಗೊಳ್ಳುವರು.
10 ಲಕ್ಷಕ್ಕಿಂತ ಮೇಲ್ಪಟ್ಟ ಹಣ ಸಿಕ್ಕಿದಲ್ಲಿ ಆದಾಯ ತೆರಿಗೆ ಇಲಾಖೆಗೆ ವಹಿಸಬೇಕು , ಅವರು ಹಣವನ್ನು ಪರಿಶೀಲನೆ ನಡೆಸಿ ಹಣದ ಮಾಹಿತಿ ಸಿಗದಿದ್ದಲ್ಲಿ ಅವರ ವಿರುದ್ದ ಪ್ರಕರಣ ದಾಖಲಾಯಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ , ಚುನಾವಣಾ ತಹಶೀಲ್ದಾರ್ ಬಿ.ನಾಗವೇಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.