ಕೋಲಾರ (ವಿಶ್ವಕನ್ನಡಿಗ ನ್ಯೂಸ್): ಜಲಜೀವನ್ ಮಿಷನ್ ದೇಶದ್ಯಾಂತ ಜಾರಿಯಾಗಿದ್ದು ಈ ಯೋಜನೆಯು 2024 ಕ್ಕೆ ಪೂರ್ಣಗೊಳ್ಳಲಿದ್ದು , 2024 ರೊಳಗೆ ಪ್ರತಿ ಮನೆ ಮನೆಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ , ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಹಳ್ಳಿಗೆ ಬೇಟಿ ನೀಡಿ ಜಲ ಮೂಲಗಳನ್ನು ಗುರುತಿಸಿಕೊಂಡು , ಪ್ರತಿ ಕುಟುಂಬಕ್ಕೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ನಲ್ಲಿಗಳನ್ನು ಆಳವಡಿಸಲು ಯೋಜನೆಯನ್ನು ರೂಪಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಲ್ಯಾಬೋರೇಟರಿಗಳನ್ನು ಪರೀಕ್ಷಿಸಲು ಗ್ರಾಮ ಪಂಚಾಯಿತಿ ವತಿಯಿಂದ ವಾಟರ್ಮೆನ್ಗಳಿಗೆ ತರಬೇತಿ ನೀಡಬೇಕು.ವಾಟರ್ಮನ್ಗಳಿಗೆ 6 ಪ್ಯಾರಮೀಟರ್ಗಳನ್ನು ಪರೀಕ್ಷಿಸಲು ಬರಬೇಕು . ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರು ಬರುತ್ತಿರುವುದರಿಂದ ನೀರನ್ನು ಆಗಾಗಲೇ ಪರೀಕ್ಷೆ ಮಾಡಬೇಕು . ನರೇಗಾ ಯೋಜನೆಯಡಿ ಕಿಚನ್ ಗಾರ್ಡನ್ , ಆಟದ ಮೈದಾನ , ಶಾಲಾ ಕಾಂಪೌಂಡ್ಗಳನ್ನು ನಿರ್ಮಿಸಿ , ಪಾರ್ಕ್ಗಳ ನಿರ್ಮಾಣಕ್ಕೆ ಮಿತ ವೆಚ್ಚವನ್ನು ಮಾಡಿ . ಹಸಿರು ಗಿಡಗಳನ್ನು ಹೆಚ್ಚಾಗಿ ಬೆಳಸಿ ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು . ಜಿಲ್ಲೆಯ 156 ಗ್ರಾಮ ಪಂಚಾಯಿತಿಗಳಲ್ಲಿರುವ ಗ್ರಂಥಾಲಯಗಳಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಓದಲು ಉತ್ತಮ ಅವಕಾಶಗಳನ್ನು ಕಲ್ಪಿಸಿ , ಪ್ರತಿ ಗ್ರಂಥಾಲಯಕ್ಕೆ ಓದುವ ಕೋಣೆಗಳನ್ನು ಒದಗಿಸಿ . ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಓದುವ ಪುಸ್ತಕಗಳನ್ನು ಒದಗಿಸಿ ಎಂದರು .
ಜಿಲ್ಲಾಧಿಕಾರಿಗಳಾದ ಡಾ | ಆರ್.ಸೆಲ್ವಮಣಿ ಅವರು ಮಾತನಾಡಿ , ಜಿಲ್ಲೆಯ 156 ಗ್ರಾಮ ಪಂಚಾಯಿತಿಗಳಿಗೆ ವೆಸ್ಟ ಮ್ಯಾನೆಂಜಮೆಂಟ್ ನಿರ್ವಹಣೆಗೆ ಜಾಗ ನೀಡಲಾಗಿದೆ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್ , ಜಿಲ್ಲಾ ಪಂಚಾಯತ್ ಉಪ ಕಾರ್ಯದಶಿಗಳಾದ ಸಂಜೀವಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.