ಕೋಲಾರ (ವಿಶ್ವಕನ್ನಡಿಗ ನ್ಯೂಸ್): ದತ್ತಮಾಲಾಧಾರಿಗಳ ಮೇಲೆ ನಡೆದ ದೌರ್ಜನ್ಯದ ಕೃತ್ಯ ಅತ್ಯಂತ ಘೋರ ಮತ್ತು ಹೇಯ ಘಟನೆ , ಇದಕ್ಕೆ ಕಾರಣವಾದ ಮುಸ್ಲಿಂ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡುವ ಮೂಲಕ ಹಿಂದೂಗಳಿಗೆ ಧೈರ್ಯ ತುಂಬಬೇಕಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು .
ಕೋಲಾರ ಬಂದ್ ಹಿನ್ನಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದ ಅವರನ್ನು ಕೋಲಾರ ಗಡಿಯಾದ ರಾಮಸಂದ್ರದ ಬಳಿ ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು. ಘಟನೆ ನಡೆದ ದಿನ ಪೊಲೀಸರು ಬರುವುದು ಸ್ವಲ್ಪ ತಡಮಾಡಿದ್ದರೂ ಅಂದು ದತ್ತಮಾಲಾಧಾರಿಗಳು ಭಸ್ಮವಾಗುತ್ತಿದ್ದರು , ಅದನ್ನ ತಡೆದ ಪೊಲೀಸರಿಗೆ ಧನ್ಯವಾದ ಹೇಳುವ ಎಂದರು. ಆದ್ರೆ ಬಿಜೆಪಿ ಸರ್ಕಾರ ಇಂದು ನಡೆದುಕೊಳ್ಳುತ್ತಿರುವ ಕ್ರಮ ಸರಿಯಿಲ್ಲ ಎಂದು ಟೀಕಿಸಿದರು.
ಹಿಂದು ಸಮಾಜದವರ ಮೇಲೆ ದೌರ್ಜನ್ಯ ಮಾಡಿದವರ ಮೇಲೆ ಪ್ರತಿಭಟನೆ ಮಾಡಲು ಸಹ ಸರ್ಕಾರ ಅವಕಾಶ ಮಾಡಿಕೊಡದ ಬಗ್ಗೆ ನೋವು ಸಿಟ್ಟು ಆಗುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಸಂವಿಧಾನ ಮತ್ತು ಕಾನೂನು ಬದ್ಧ ವಾಗಿ ಹೋರಾಟ ಮಾಡಲಾಗುತ್ತಿದೆ. ಅದು ನಮ್ಮ ಹಕ್ಕು , ಆದರೆ ಸರ್ಕಾರದ ಈ ಕ್ರಮ ಸರಿಯಲ್ಲ ಎಂದರು. ಇನ್ನು ಹಿಂದುಗಳಿಗೆ ಧೈರ್ಯ ತುಂಬಬೇಕಾಗಿದೆ . ಅದೇ ರೀತಿ ಮುಸ್ಲಿಂ ಕೀಡಿಗೇಡಿಗಳಿಗೆ ಎಚ್ಚರಿಕೆ ಕೊಡಬೇಕಾಗಿದೆ . ಹೀಗಾಗಿ ಇಡೀ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಪೊಲೀಸರ ವಶಕ್ಕೆ ಮುತಾಲಿಕ್ – ಧರಣಿ
ಇದೇ ವೇಳೆ ಕೋಲಾರ ತಾಲ್ಲೂಕು ರಾಮಸಂದ್ರ ಬಳಿ ಹೊಸಕೋಟೆ ತಾಲ್ಲೂಕು ನಂದಗುಡಿ ಪೊಲೀಸರು ವಶಕ್ಕೆ ಪಡೆದಿದ್ದು , ಇದನ್ನ ಖಂಡಿಸಿ ವಾಹನಕ್ಕೆ ಅಡ್ಡ ಕುಳಿತು ಶ್ರೀರಾಮ ಸೇನೆ ಕಾರ್ತಕರ್ತರು ಪ್ರತಿಭಟನೆ ಮಾಡಿದರು. ಈ ವೇಳೆ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗಿದ್ದು , ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ , ಮುತಾಲಿಕ್ ಅವರನ್ನು ನಂದಗುಡಿ ಪೊಲೀಸ್ ಠಾಣೆಗೆ ಕರೆದೊಯ್ದರು .ನಂದಗುಡಿ ಠಾಣೆಯಲ್ಲಿ ಮುತಾಲಿಕ್ರೊಂದಿಗೆ ಬಿಜೆಪಿ ಮುಖಂಡ ಕೆ.ಎಸ್.ರಾಜೇಂದ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಮೇಶ್ರಾಜ್ , ಶಬರಿ , ಸುಪ್ರಿತ್ , ಮಹೇಶ್ , ಚಿನ್ನಪಿ , ಗೋವಿಂದು , ನಾಗರಾಜ್ಯಾದವ್ , ಸಿದ್ದನಹಳ್ಳಿ ಕಿಶೋರ್ ಮತ್ತಿತರರು ಹಾಜರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.