ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್): ಗುಣಮಟ್ಟದ ಹಾಲು ಉತ್ಪಾದಿಸುವಂತೆ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಬೇಕು. ಅವರ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಕ್ರಮ ಕೈಗೊಳ್ಳಬೇಕು ಎಂದು ಕೋಚಿಮುಲ್ ಶಿಬಿರ ಕಚೇರಿ ಉಪ ವ್ಯವಸ್ಥಾಪಕ ನರಸಿಂಹಯ್ಯ ಹೇಳಿದರು.
ತಾಲ್ಲೂಕಿನ ಬಂಗವಾದಿ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿ, ಹಸುಗಳ ಸಾವಿನಿಂದ ಆಗುವ ನಷ್ಟ ತಪ್ಪಿಸಲು, ರೈತರು ರಾಸು ವಿಮೆ ಮಾಡಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಸಮುದಾಯ ಹಾಲು ಕರೆಯುವ ಯಂತ್ರಗಳನ್ನು ಸ್ಥಾಪಿಸಲಾಗುತ್ತಿದೆ. ಸಂಘದ ಕಟ್ಟಡ ನಿರ್ಮಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ನೆರವು ನೀಡಲಾಗುತ್ತಿದೆ. ಈ ಸೌಲಭ್ಯ ಸಿಗಬೇಕಾದರೆ ಹಾಲು ಉತ್ಪಾದಕರು ಕೋಚಿಮುಲ್ ವ್ಯಾಪ್ತಿಯ ಡೇರಿಗಳಿಗೆ ಹಾಲು ಹಾಕಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿಕುಮಾರ್, ಸಂಘದ ಅಧ್ಯಕ್ಷ ಡಿ.ಎನ್.ಪ್ರಕಾಶ್, ನಿರ್ದೇಶಕರು ಇದ್ದರು.ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.