ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕರಾಳ ಕೃಷಿಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ, ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.
ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು.ಇದುವೇ ಪ್ರಜಾಪ್ರಭುತ್ವದ ಸೊಗಸು.ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ನುಡಿದಿದ್ದಾರೆ.
ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು.ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ.
ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ದ ಜನ ಹೋರಾಟಕ್ಕೆ ನಾಂದಿಯಾಗಲಿದೆ.ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಹೇಳಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.