ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ಪುರಸಭೆ ಕಚೇರಿ ಆವರಣದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡ ತೆರವುಗೊಳಿಸುವಂತೆ ಆಗ್ರಹಿಸಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬೆಂಬಲಿತ ಪುರಸಭಾ ಸದಸ್ಯರು ಶನಿವಾರ ಪುರಸಭಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ , ಪುರಸಭಾಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಖಾಸಗಿ ವ್ಯಕ್ತಿಗಳಿಂದ ಅಕ್ರಮ ಸಂಭಾವನೆ ಪಡೆದು ಪುರಸಭೆಗೆ ಸೇರಿದ ಜಮೀನಲ್ಲಿ ಕಟ್ಟಡ ನಿರ್ಮಿಸಲು ಅವಕಾಶ ಮಾಡಿಕೊಟ್ಟಿದ್ದಾರೆ . ಪುರಸಭೆಯಲ್ಲಿ ಹಣ ನೀಡದ ಯಾವುದೇ ಕೆಲಸ ಆಗುತ್ತಿಲ್ಲ .
ಪುರಸಭೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದೆ ಎಂದು ಆಪಾದಿಸಿದರು . ಈ ಸಂದರ್ಭದಲ್ಲಿ ತಹಶೀಲ್ದಾರ್ ಎಸ್.ಎಂ.ಶೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ , ಪ್ರತಿಭಟನಕಾರರು ಹಾಗೂ ಮುಖ್ಯಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದ ಬಳಿಕ , ಜಿಲ್ಲಾಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ , ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡ ತೆರವುಗೊಳಿಸಲು ಅನುಮತಿ ಪಡೆದುಕೊಂಡರು .
ತಕ್ಷಣ ಜೆಸಿಬಿ ನೆರವಿನಿಂದ ಕಟ್ಟಡ ಕೆಡವಲಾಯಿತು . ಜಿಲ್ಲಾಧಿಕಾರಿಗಳು ಕೈಗೊಂಡ ಕ್ರಮವನ್ನು ಸ್ವಾಗತಿಸಿ ಪ್ರತಿಭಟನಕಾರರು ಪಟಾಕಿ ಸಿಡಿಸಿ ಸಂಭ್ರಮಿಸಿದರು . ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ , ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ , ಮುಖಂಡರಾದ ಭಾಸ್ಕರ್ , ನಾಗರಾಜ್ , ಅನೀಸ್ ಅಹ್ಮದ್ , ಪೈರೋಜ್ , ಮುರಳಿ , ವೇಣು , ಹರೀಶ್ ಕುಮಾರ್ , ರಾಜು ಇದ್ದರು .
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.