(www.vknews.com) ; ಬೆಳ್ತಂಗಡಿಯ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ರಿಕ್ಷಾ ಚಾಲಕ ಮತ್ತು ಆತನ ಸಹೋದರನ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಎಸ್ಡಿಟಿಯು ಆಟೋ ಚಾಲಕರ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ಖಂಡಿಸಿದೆ
ತ್ರಿಶೂಲ ದೀಕ್ಷೆ, ದ್ವೇಷ ಬಾಷಣದಿಂದ ಪ್ರೇರಿತವಾದ ದುಷ್ಕರ್ಮಿಗಳು ತ್ರಿಶೂಲ ದಂತಹ ಮಾರಕಾಸ್ತ್ರವನ್ನು ಕೈಯಲ್ಲಿ ಇಟ್ಟು ಜಿಲ್ಲೆಯ ವಿವಿಧ ಕಡೆ ಅನೈತಿಕ ಪೋಲಿಸ್ ಗಿರಿ ಹಲ್ಲೆ, ಇರಿತದಂತಹ ದುಷ್ಕ್ರತ್ಯ ನಡೆಸುತ್ತಿದ್ದು ಪೋಲಿಸ್ ಇಲಾಖೆ ಇಂತಹ ಪುಂಡಾಟಿಕೆ ನಡೆಸುತ್ತಿರುವ ದುಷ್ಕರ್ಮಿಗಳನ್ನು ಹೆಡೆಮುರಿ ಕಟ್ಟಿ ಜಿಲ್ಲೆಯ ಶಾಂತಿ ಸಾಮರಸ್ಯವನ್ನು ಕಾಪಾಡಬೇಕಾಗಿದೆ ಎಂದು ಎಸ್ಡಿಟಿಯು ಬೆಳ್ತಂಗಡಿ ತಾಲೂಕು ಅಧ್ಯಕ್ಷ ನವಾಝ್ ಜಿಕೆ ಆಗ್ರಹಿಸಿದ್ದಾರೆ.
ದಿನನಿತ್ಯ ಶ್ರಮ ವಹಿಸಿ ದುಡಿಯುವ ಶ್ರಮಿಕ ವರ್ಗವನ್ನು ಬಿಡದೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮದಿಂದ ಹಲ್ಲೆಗೊಳಗಾದ ಸಹೋದರರಿಬ್ಬರು ತೀವ್ರ ರೀತಿಯ ಗಾಯಗಳಾಗಿ ನಗರದ ಖಾಸಾಗಿ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಬೆಳ್ತಂಗಡಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕ್ಷಿಪ್ರ ಕಾರ್ಯರಣೆ ನಡೆಸಿ ಆರೋಪಿಗಳನ್ನು ಬಂದಿಸಿದ್ದನ್ನು ಯೂನಿಯನ್ ಶ್ಲಾಘನೆ ವ್ಯಕ್ತಪಡಿಸಿದೆ. ಪೋಲಿಸ್ ಇಲಾಖೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಹಲ್ಲೆಗೊಳಗಾದ ಸಂತ್ರಸ್ಥರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಎಸ್ಡಿಟಿಯು ಆಟೋ ಚಾಲಕರ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ಒತ್ತಾಯಿಸುತ್ತದೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.