ಮಂಗಳೂರು (www.vknews.com) : ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಕೂಳೂರಿನ ನಾಗಬನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್ ಸಫ್ವಾನ್, ಸುಹೈಬ್, ಪ್ರವೀಣ್, ಅನಿಲ್ ಮೊಂತೇರೊ, ಮತ್ತು ನೌಶಾದ್ ಬಂಧಿತ ಆರೋಪಿಗಳು.
ಆರೋಪಿಗಳನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದಾರೆ ಎಂದು ಮಂಗಳೂರು ಕಮಿಷನರ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕೆದಡಿ ಪೊಲೀಸರ ಚಿತ್ತವನ್ನು ಬೇರೆಡೆ ವರ್ಗಾಯಿಸಿ ಕಳ್ಳತನ ಮಾಡುವ ಉದ್ದೇಶದಿಂದ ಈ ಕೃತ್ಯವನ್ನು ಎಸಗಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ.
ವರದಿ: ಅದ್ದಿ ಬೊಳ್ಳೂರು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.