ಮಂಗಳೂರು (www.vknews.com) : ಪುತ್ತೂರು ಕೊಂಬೆಟ್ಟು ಸರಕಾರಿ ಕಾಲೇಜಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಸಮಾಜದ್ರೋಹಿ ದುಷ್ಟ ಶಕ್ತಿಗಳ ಕ್ರಮ ನಾಚಿಕೆಗೇಡಿನ ಸಂಗತಿ ಎಂದು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಹೇಳಿದ್ದಾರೆ.
ಬೆಳೆದು ಬರುತ್ತಿರುವ ಮಕ್ಕಳು ಶಾಲಾ ಕಾಲೇಜುಗಳಲ್ಲಿ ಮಾನವೀಯತೆ ಬಗ್ಗೆ ಕಲಿತು ಸಮಾಜವನ್ನು ಸುಭದ್ರ ತಳಹದಿಯಲ್ಲಿ ಕಟ್ಟುವ ಸಂಕಲ್ಪ ತೊಡಬೇಕಾದವರಾಗಿದ್ದಾರೆ.
ಆದರೆ ಇಂದಿನ ರಾಜಕೀಯ ಪ್ರೇರಿತ ವಿದ್ಯಾರ್ಥಿ ಸಂಘಟನೆ ಗಳು ಜನರನ್ನು ಧರ್ಮ,ಜಾತಿಯ ಆಧಾರದಲ್ಲಿ ವಿಭಜಿಸಿ ಸಮಾಜವನ್ನು ಒಡೆಯುವ ಮೂಲಕ ಬ್ರಿಟಿಷರ ಸಂಸ್ಕೃತಿಯನ್ನು ಅನುಸರಿಸುತ್ತಿದ್ದಾರೆ.
ಶಾಲಾ ಕಾಲೇಜ್ ಕ್ಯಾಂಪಸ್ ಗಳಲ್ಲಿ ಯಾವುದೇ ಪಕ್ಷದ ಪರವಾಗಿರುವ ಸಂಘಟನೆಗಳಿಗೆ ಯಾವುದೇ ರೀತಿಯ ಅವಕಾಶಗಳನ್ನು ನೀಡದೆ ನಿಷೇಧ ಮಾಡಿದರೆ ಮಾತ್ರ ಸಮಾಜ ನೆಮ್ಮದಿಯಿಂದ ಬದುಕಬಹುದು.
ಕೊಂಬೆಟ್ಟು ಸರಕಾರಿ ಶಾಲಾ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವವರ ಹಿನ್ನಲೆಯನ್ನು ಸಮಗ್ರ ತನಿಖೆ ನಡೆಸಿ ಬಹಿರಂಗ ಪಡಿಸಿ ನಾಗರಿಕರಿಗೆ ಆಡಳಿತ ವರ್ಗದ ಮೇಲೆ ಭರವಸೆ ಹುಟ್ಟುವಂತೆ ಮಾಡುವುದು ಇಂದಿನ ತುರ್ತು ಅನಿವಾರ್ಯತೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.