ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
ಮಾಲೂರು ತಾಲ್ಲೂಕಿನ ಟೇಕಲ್ ನ ಬಂಡೂರು ಅಗ್ರಹಾರದ ಸಮಾಜ ಸೇವಕರು, ಮುಖಂಡರಾದ ಡಾ.ನಾರಾಯಣಸ್ವಾಮಿ ಅವರ ಸಮಾಜಸೇವೆ, ಧಾರ್ಮಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆ ಪರಿಗಣಿಸಿ ಚೆನ್ನೈನ ಏಷಿಯಾ ವೇದಿಕಾ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯು ಡಾಕ್ಟರೇಟ್ ನೀಡಿರುವುದರಿಂದ ಅವರಿಗೆ ಪ್ರೀತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಸೇವಕ, ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್, ಬಂಡೂರು ನಾರಾಯಣಸ್ವಾಮಿ ರವರ ಧರ್ಮ ಪತ್ನಿಯಾದ ಶ್ರೀಮತಿ ಲಕ್ಷ್ಮೀದೇವಮ್ಮ, ಬಿಜೆಪಿ ಮುಖಂಡ ಆರ್ ಪ್ರಭಾಕರ್, ಬಿಜೆಪಿ ತಾಲೂಕು ಅಧ್ಯಕ್ಷರಾದ ಪುರ ನಾರಾಯಣಸ್ವಾಮಿ, ಪುರಸಭಾ ಸದಸ್ಯರಾದ ಭಾನು ತೇಜಾ, ಕುರಿ ಮಂಜುನಾಥ್, ಮುಖಂಡರಾದ ಕೆ ವಿ ಗಿರಿ, ಬೆಟ್ಟಹಳ್ಳಿ ನಾರಾಯಣಸ್ವಾಮಿ ಹಾಗೂ ಸ್ಥಳೀಯ ಮುಖಂಡರು ಕಾರ್ಯಕರ್ತರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.