ಬ್ರಹ್ಮಾವರ,(ವಿಶ್ವ ಕನ್ನಡಿಗ ನ್ಯೂಸ್ ) : ಅತೀ ವೇಗದಿಂದ ಬಂದ ಸ್ವಿಪ್ಟ್ ಕಾರೊಂದು ಮೀನಿನ ಪಿಕಪ್ ಹಾಗೂ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೀನು ಸಾಗಾಟದ ಓರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಮಲಸವಾರಿ ದೇವಸ್ಥಾನದ ಸಮೀಪ ಸಂಭವಿಸಿದೆ.
ಮೃತರನ್ನು ಮೀನು ಸಾಗಾಟದ ಮಿನಿ ಪಿಕಪ್ ಚಾಲಕ, ಮಧುವನ ಅಚ್ಲಾಡಿ ನಿವಾಸಿ ಸುರೇಶ್ ಮರಕಾಲ(40) ಎಂದು ಗುರುತಿಸಲಾಗಿದೆ. ಸಹ ಸವಾರ ರಾಜು ಮರಕಾಲ(60) ಹಾಗೂ ಬೈಕ್ ಸವಾರ ಶಿರಿಯಾರ ನಿವಾಸಿ ಸುಬ್ರಹ್ಮಣ್ಯ ಕುಲಾಲ್(42) ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಣಿಪಾಲದ ಆಸ್ಪತ್ರೆಗೆ ಸಾಗಿಸಲಾಗಿದೆ . ಮಲ್ಪೆಯಿಂದ ಮೀನು ಖರೀದಿಸಿ ಮೀನು ಹೇರಿಕೊಂಡು ಸಾಹೇಬ್ರಕಟ್ಟೆಗೆ ಬರುತ್ತಿದ್ದ ಸಂದರ್ಭ . ಸ್ವಿಫ್ಟ್ ಕಾರೊಂದು ಅತೀವೇಗದಲ್ಲಿ ಬಂದು ಬೈಕ್ ಮತ್ತು ಮಿನಿ ಪಿಕಪ್ ಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ.ಅಪಘಾತದ ರಭಸಕ್ಕೆ ಸುರೇಶ್ ಮರಕಾಲ ಒಳಗಡೆ ಸಿಲುಕಿಕೊಂಡಿದ್ದರು. ಬಳಿಕ ಸ್ಥಳೀಯರು ಹರಸಾಹಸಪಟ್ಟು ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿಸಲಾಯಿತಾದರೂ . ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.