ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್): ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಪಕ್ಷ ಭೇದ ಮರೆತು ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ಅನಿಲ್ ಕುಮಾರ್ ಅವರಿಗೆ ಮತ ನೀಡುವುದರ ಮೂಲಕ , ಪಕ್ಷದ ಘನತೆಯನ್ನು ಎತ್ತಿಹಿಡಿಯಬೇಕು ಎಂದು ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರಾಟ ನಿಗಮದ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಮನವಿ ಮಾಡಿದರು .
ಪಟ್ಟಣದ ವೆಂಕಟೇಶಗೌಡ ಕಲ್ಯಾಣ ಮಂಟಪದ ಆವರಣದಲ್ಲಿ ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿ , ‘ ನಾನು ಕಾಂಗ್ರೆಸ್ ತೊರೆದು ಬೇರೆ ಪಕ್ಷಕ್ಕೆ ಹೋಗುವುದಾಗಿ ಕೆಲವರು ಹೇಳುತ್ತಿರುವುದು ಬರಿ ಊಹಾಪೋಹ , ೩೫ ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಹಾಗಾಗಿ ಬೇರೆ ಪಕ್ಷಕ್ಕೆ ವಲಸೆ ಹೋಗುವ ಪ್ರಶ್ನೆಯೇ ಇಲ್ಲ.
ಹಾಗೊಮ್ಮೆ ಹೋಗುವುದಾದರೆ ಸಾರ್ವಜನಿಕವಾಗಿ ತಿಳಿಸಿ ಹೋಗುತ್ತೇನೆ . ಅದಕ್ಕೆ ಯಾರ ಅಪ್ಪಣೆ ಪಡೆಯಬೇಕಾದ ಅಗತ್ಯವಿಲ್ಲ ‘ ಎಂದು ಮಾರ್ಮಿಕವಾಗಿ ಹೇಳಿದರು. ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರೊಂದಿಗೆ ಮನಸ್ತಾಪ ಇರುವುದು ನಿಜ . ಪಕ್ಷದಲ್ಲಿ ನನ್ನ ಹಿರಿತನ ಹಾಗೂ ಪಕ್ಷ ನಿಷ್ಠೆಗೆ ಸೂಕ್ತ ಸ್ಥಾನ ಮಾನ ಸಿಗದಿರುವುದರ ಬಗ್ಗೆ ಅತೃಪ್ತಿ ಇದೆ.
ಪಕ್ಷದ ಬೆಳವಣಿಗೆ ಹಾಗೂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವ ವ್ಯಕ್ತಿ ಪಕ್ಷದಿಂದ ಸ್ಥಾನ ಮಾನ ನಿರೀಕ್ಷಿಸುವುದರಲ್ಲಿ ತಪ್ಪಿಲ್ಲ ‘ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ , ಕೋಚಿಮುಲ್ ಮಾಜಿ ಅಧ್ಯಕ್ಷರಾದ ಎನ್.ಜಿ.ಬ್ಯಾಟಪ್ಪ , ದ್ವಾರಸಂದ್ರ ಮುನಿವೆಂಕಟಪ್ಪ , ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಕರ್ ಷರೀಫ್ , ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ , ಮುಖಂಡರಾದ ಗೋಪಾಲರೆಡ್ಡಿ , ಶಶಿಕುಮಾರ್ , ಗುರಪ್ಪ , ಕೃಷ್ಣಗೌಡ , ರವಿಕುಮಾರ್ ಇದ್ದರು .ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.