ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
ಮಾಲೂರು ತಾಲ್ಲೂಕಿನ ಯಶವಂತಪುರ ಗ್ರಾಮದ ರೋಟರಿ ಓಸಾಟ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಶ್ವಥ್ ನಾರಾಯಣಗೌಡ ಮತ್ತು ಸಹೋದರರು ಇವರಿಂದ ಉಚಿತ ಕಂಪ್ಯೂಟರ್ ಗಳ ಕೊಡುಗೆ ಹಾಗೂ ಕ್ರೀಡಾ ಪರಿಕರಗಳನ್ನು ವಿತರಣೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದ ಯಶವಂತಪುರ ಗ್ರಾಮದ ಮುಖಂಡರು, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಗಳು, ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಮುನಿರಾಜ್ ರವರು ಮಾತನಾಡುತ್ತಾ “ಗ್ರಾಮೀಣ ಪ್ರದೇಶದಲ್ಲಿನ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನದ ಶಿಕ್ಷಣ ಅವಶ್ಯಕತೆ ಇದ್ದು, ವಿದ್ಯಾರ್ಥಿಗಳ ಹೆಚ್ಚಿನ ವಿಕಾಸಕ್ಕೆ ಕಂಪ್ಯೂಟರ್ ಜ್ಞಾನದ ಅವಶ್ಯಕ ಇದ್ದು, ಇಂದಿನ ದಿನಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗಳಿಗೂ ಕೂಡಾ ಮಾಹಿತಿ ತಂತ್ರಜ್ಞಾನದ ಅವಶ್ಯಕತೆ ಇದೆ. ಇದರ ಬಗ್ಗೆ ಚರ್ಚಿಸಿ ದಾನಿಗಳಾದ ಅಶ್ವಥ್ ನಾರಾಯಣಗೌಡ ಹಾಗೂ ಸಹೋದರರಿಂದ ಉಚಿತ ಕಂಪ್ಯೂಟರ್ ಹಾಗೂ ಮಕ್ಕಳಿಗೆ ಟೀ ಶರ್ಟ್ ವಿತರಿಸಿರುವುದು ಹೆಮ್ಮೆ ಇದನ್ನು ಎಲ್ಲಾರೂ ಸದ್ಬಳಕ್ಕೆ ಆಗಲಿ” ಎಂದರು.
ಯಶವಂತಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಚಿತ ಕಂಪ್ಯೂಟರ್ ವಿತರಣೆ ಮಾಡಿದ ಅಶ್ವಥ್ ನಾರಾಯಣಗೌಡ ಮಾತನಾಡಿ “ನಮ್ಮ ಹೆಮ್ಮೆಯ ಯಶವಂತಪುರ ಸರ್ಕಾರಿ ಶಾಲೆಗೆ ಇಂದು ಉಚಿತ ಕಂಪ್ಯೂಟರ್ ಗಳನ್ನು ಉಚಿತವಾಗಿ ನೀಡುವ ಕಾರ್ಯ ಮಾಡಿರುವುದು, ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಮಾಹಿತಿ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ನಮ್ಮೂರಿನ ಕೀರ್ತಿಯನ್ನು ಉನ್ನತ ಸ್ಥಾನಕ್ಕೆ ತಲುಪಿಸುವ ಕಾರ್ಯ ಮಾಡಲಿ” ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ಈಶ್ವರಯ್ಯ ರವರು ಮಾತನಾಡಿ “ಶೈಕ್ಷಣಿಕ ಪ್ರಗತಿಗಾಗಿ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳನ್ನು ದಾನಿಗಳ ಸಹಕಾರದಲ್ಲಿ ಕಲ್ಪಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು. ಉನ್ನತ ಸ್ಥಾನಕ್ಕೆ ತಲುಪಿದ ನಂತರ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು ಕಿವಿಮಾತು” ಹೇಳಿದರು.
ಈ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಗಳನ್ನು ಉಚಿತವಾಗಿ ನೀಡಿದ ಅಶ್ವಥ್ ನಾರಾಯಣಗೌಡ ಹಾಗೂ ಸಹೋದರರು, ಗ್ರಾಮ ಪಂಚಾಯಿತಿ ಸದಸ್ಯರಾದ ರಾಘವೇಂದ್ರ, ಶ್ರೀಮತಿ ಸರೋಜಮ್ಮ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ನಾರಾಯಣಸ್ವಾಮಿ, ನರಸಿಂಹಯ್ಯ, ಶ್ರೀಮತಿ ಪುಟ್ಟಮ್ಮ ಮಕ್ಕಳು, ವೈ.ಆರ್.ರಾಮಪ್ಪ, ವೈ.ಎಂ.ಅಶ್ವಥ್, ಕಾಂತರಾಜು, ಶ್ರೀಮತಿ ಸುಗುಣ, ಲಯ, ಚಾರುಕೇಶ್, ಶಿಕ್ಷಕರಾದ ಶ್ರೀಮತಿ ರಾಧಬಾಯಿ, ಊರ್ದು ಶಾಲೆಯ ಮುಖ್ಯೋಪಾಧ್ಯಾಯರಾದ ಆರೀಫ್, ಪ್ರಥಮ್ ಸಂಸ್ಥೆಯ ಸುನೀತಾ, ಅಂಬಿಕಾ ಇತರರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.