ಶ್ರೀನಿವಾಸಪುರ(ವಿಶ್ವಕನ್ನಡಿಗ ನ್ಯೂಸ್) : ಮೃತಪಟ್ಟ ರಾಸುಗಳ ವಿಮಾ ಪರಿಹಾರ ಪಡೆದ ಹಾಲು ಉತ್ಪಾದಕರು ಮತ್ತೆ ಕಡ್ಡಾಯವಾಗಿ ರಾಸುಗಳನ್ನು ಖರೀದಿಸಬೇಕು . ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಿ , ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಮಾರಾಟ ಮಾಡಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು .
ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರಿಗೆ ಮೃತಪಟ್ಟ ರಾಸುಗಳ ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ , ಬೇರೆ ಬೇರೆ ಕಾರಣಗಳಿಂದ ಹಸು ಕಳೆದುಕೊಂಡ ೧೮ ಹಾಲು ಉತ್ಪಾದಕರಿಗೆ ರೂ .೧೦.೪೫ ಲಕ್ಷ ಮೌಲ್ಯದ ಚೆಕ್ಗಳನ್ನು ವಿತರಿಸಲಾಗಿದೆ ಎಂದು ಹೇಳಿದರು .
ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಕೆ.ಎಸ್.ನರಸಿಂಹಯ್ಯ ಮಾತನಾಡಿ , ಹಾಲಿನ ಗುಣಮಟ್ಟ ಹೆಚ್ಚಿಸಿಕೊಳ್ಳಲು ಹಸಿರು ಮತ್ತು ಒಣ ಮೇವಿನ ಜತೆಗೆ ಪಶು ಆಹಾರ , ಖನಿಜ ಮಿಶ್ರಣ , ಗೋಧಾರ ಶಕ್ತಿ ಮತ್ತು ಟ್ರಿಯೋ ಎನ್ಬಿ ಸ್ಯಾಕ್ ಪುಡಿಗಳನ್ನು ಬಳಸಬೇಕು . ಕೆಚ್ಚಲು ಬಾವು . ನಿಯಂತ್ರಣ ಮಾಡಲು ಸಾಫ್ ಕಿಟ್ ಬಳಸಬೇಕು . ಕಾಲುಬಾಯಿ ಜ್ವರದ ವಿರುದ್ಧ ಲಸಿಕೆ ಹಾಕಿಸಬೇಕು ಎಂದು ಸಲಹೆ ಮಾಡಿದರು .
ಉಪ ಕಚೇರಿ ವಿಸ್ತರಣಾಧಿಕಾರಿಗಳಾದ ಎಂ.ಜಿ.ಶ್ರೀನಿವಾಸ್ , ಎನ್.ಶಂಕರ್ , ಪಿ.ಕೆ.ನರಸಿಂಹರಾಜು , ಎಸ್.ವಿನಾಯಕ , ಕೆ.ಪಿ.ಶ್ವೇತ ಇದ್ದರು .ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.