ಕೋಲಾರ (ವಿಶ್ವಕನ್ನಡಿಗ ನ್ಯೂಸ್):- ರಸ್ತೆ ಬದಿ ಮತ್ತು ತಳ್ಳುವ ಗಾಡಿ ಮೇಲೆ ಇಟ್ಟುಕೊಂಡು ವ್ಯಾಪಾರ ಮಾಡುತ್ತಾರೆ. ಅವರ ಸರ್ವೇ ಮಾಡಿರುವುದು ಇಲಾಖೆ ತಪ್ಪಾಗಿದೆ. ಸರ್ಕಾರ ಕುಲಂಕುಶವಾಗಿ ಪರಿಶೀಲನೆ ನಡೆಸಿಲ್ಲ. ಇನ್ನಾದರು ಸರಿಯಾದ ರೀತಿ ಸರ್ವೇ ಮಾಡಿ ಅರ್ಹರನ್ನು ಗುರುತಿಸಿ ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಸೌಕರ್ಯ ಕಲ್ಪಿಸಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಒತ್ತಾಯಿಸಿದರು.
ಬೆಳಗಾವಿಯ ಅಧಿವೇಶನದ ಕಲಾಪದಲ್ಲಿ ಮಾತನಾಡಿದ ಗೋವಿಂದರಾಜು ಅವರು, ರಸ್ತೆ ಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದರೆ ಸರ್ಕಾರ ಸಮರ್ಪಕವಾದ ಮಾಹಿತಿ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗಾಗಿ ಬಡವರ ಬಂದು ಕಾರ್ಯಕ್ರಮವನ್ನು ಯಾಕೆ ಸ್ಪಷ್ಟ ಉತ್ತರ ನೀಡಿಲ್ಲ. ಬೀದಿ ಬದಿ ವ್ಯಾಪಾರಿಗಳ ಸರ್ವೇ ಕಾರ್ಯ ಸಮರ್ಪಕವಾಗಿ ಇಲ್ಲ ಎಂದು ದೂರಿದರು.
ಸಚಿವ ಡಾ.ಅಶ್ವಥ್ ನಾರಾಯಣ ಮಾತನಾಡಿ, ಸಣ್ಣ ವ್ಯಾಪಾರಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಸರ್ಕಾರ ಸೌಕರ್ಯ ಕಲ್ಪಿಸಲು ಬದ್ಧವಾಗಿದೆ. ರಾಜ್ಯದಲ್ಲಿ ಬೀದಿ ವ್ಯಾಪಾರಿಗಳಿಗಾಗಿ 43 ಮಾರುಕಟ್ಟೆಗಳನ್ನು ನಿರ್ಮಿಸಲು ಕ್ರಮಕೈಗೊಂಡಿದ್ದು, ಅದು ಪ್ರಗತಿಯಲ್ಲಿದೆ.
ಜೊತೆಗೆ ಕೌಶಲ್ಯ ತರಬೇತಿ ನೀಡಲಾಗಿದೆ. 15 ಕೋಟಿ ವೆಚ್ಚದಲ್ಲಿ ಪ್ರಗತಿ ಕಾರ್ಯ ನಡೆಯುತ್ತಿದೆ. ಸ್ಥಳೀಯ, ನಗರಮಟ್ಟದಲ್ಲಿ ವ್ಯವಸ್ಥಿತವಾಗಿ ಮಾರುಕಟ್ಟೆ ನಡೆಯುತ್ತಿದೆ. ಬೀದಿ ಬದಿ ವ್ಯಾಪಾರಿಗಳು ಸಬಲೀಕರಣ ಆಗುತ್ತಿರುವುದು ಕಾಣಲಾಗುತ್ತಿದೆ ಎಂದು ಹೇಳಿದರು.
ಪ್ರತಿ ವ್ಯಾಪಾರಿಗೂ ಸೌಕರ್ಯ ಕಲ್ಪಿಸಲು 8 ಯೋಜನೆಗಳನ್ನು ವಿಸ್ತರಿಸಲಾಗಿದೆ. ಬ್ಯಾಂಕಿನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಯಾವ ರೀತಿ ಸಾಲ ಸಿಗುತ್ತಿತ್ತು ಎಂಬುದು ತಿಳಿಸಿದೆ.
ಹಿಂದೆ ವ್ಯಾಪಾರಿಗಳು ಖಾಸಗಿ ಬಡ್ಡಿ ಲೇವಾದೇವಿದಾರರಿಂದ ಸಾಲ ಪಡೆಯುತ್ತಿದ್ದರು. ಅವರು ವ್ಯಾಪಾರ ಮಾಡಿದ ಹಣದಲ್ಲಿ ಸಂಜೆ ಬಡ್ಡಿ ಕಟ್ಟಬೇಕಾಗಿತ್ತು. ಆದರೆ ಈಗ ಉತ್ತಮವಾಗಿ ಬಾಳಿ ಬದುಕಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, 10 ಸಾವಿರ ಸಾಲ ಕೊಟ್ಟಿರುವುದು ಶೇ.7ರಷ್ಟು ಬಡ್ಡಿ ದರದಲ್ಲಿ. ಇತರೆ ಚಟುವಟಿಕೆ ನಡೆಸುತ್ತಿರುವವರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದೆ. ಅದೇ ರೀತಿ ಇವರಿಗೂ ಬಡ್ಡಿರಹಿತ ಸಾಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಬೀದಿ ಬದಿ ವ್ಯಾಪಾರಿಗಳ ಹಿತ ರಕ್ಷಣೆಗಾಗಿ ಸರ್ಕಾರ ಕೈಗೊಂಡಿರುವ ಬಗ್ಗೆ ಸರ್ಕಾರಿ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬಡವರ ಬಂದು ಯೋಜನೆಯಡಿ ಸಾಲ ಕಲ್ಪಿಸಲಾಗುತ್ತಿತ್ತು. ಅದನ್ನು ಮುಂದುವರೆಸಿದೀಯೆ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಡಾ.ಅಶ್ವಥ್ ನಾರಾಯಣ, ರಾಜ್ಯ ಸರ್ಕಾರದಿಂದ 1,60,000 ಮಂದಿಗೆ ತಲಾ 2000 ರೂ ನೀಡಲಾಗಿದೆ. ಇದರ ಜೊತೆಗೆ ಮಾರುಕಟ್ಟೆ ಅಭಿವೃದ್ಧಿ ಜೊತೆಗೆ ಗುರುತಿನ ಚೀಟಿ, ಮಾರುಕಟ್ಟೆ ವ್ಯವಸ್ಥೆ ಸೇರಿದಂತೆ ಇನ್ನು 8 ಕಾರ್ಯಕ್ರಮಗಳನ್ನು ವ್ಯಾಪಾರಿಗಳ ಅಭಿವೃದ್ಧಿ ವಿಸ್ತರಿಸಲಾಗುತ್ತಿದೆ.
ಆತ್ಮ ನಿರ್ಮಲ ನಿಧಿಯಿಂದ 10 ರಿಂದ 20 ಸಾವಿರತನಕ ಸಾಲ ನೀಡಲಾಗುತ್ತಿದೆ ಎಂದರು.ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮಾತನಾಡಿ, ಬಡ್ಡಿ ದರದಲ್ಲಿ ಎಂತಹವರಿಗೂ ಸಾಲ ದೊರೆಯುತ್ತದೆ. ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸುಲಭದ ರೀತಿಯಲ್ಲಿ ದೊರೆಯುವುದಿಲ್ಲ.
ಈ ವ್ಯಾಪಾರಿಗಳು ಯಾರ ಹಂಗು ಇಲ್ಲದೆ ಸ್ವಾವಲಂಭಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಸರ್ಕಾರ ಅವರ ಹಿತಕಾಯಲಯಲು ಮುಂದಾಗಬೇಕು ಎಂದು ಆಗ್ರಹಿಸಿದರು.ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.