ಸೋಮವಾರಪೇಟೆ(WWW.VKNEWS.IN): SKSSF ಕೊಡಗು ಜಿಲ್ಲಾ ಸಮಿತಿಯ ನಿರ್ದೇಶನದಂತೆ, ಸೋಮವಾರಪೇಟೆ ಶಾಖೆಯ ವಾರ್ಷಿಕ ಮಹಾ ಸಭೆ ನಾಸಿರ್ ದಾರಿಮಿ ಕೂಡಿಗೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ SKSSF ಸೋಮವಾರಪೇಟೆ ಶಾಖೆಯ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನೌಶಾದ್ ಹನೀಫ ಬಜೆಗುಂಡಿ, ಉಪಾಧ್ಯಕ್ಷರಾಗಿ ಅಶ್ರಫ್ ಅಬ್ದುಲ್ಲಾ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ನೌಶಾದ್, ಕೋಶಾಧಿಕಾರಿಯಾಗಿ ಅಬ್ದುಲ್ ರಝಾಕ್ ಹಾಗೂ ಇತರ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಿ, SKSSF ಜಿಲ್ಲಾಧ್ಯಕ್ಷರ ಅನುಮೋದನೆಯೊಂದಿಗೆ ನೂತನ ಕಮಿಟಿಯನ್ನು ಅಂತಿಮ ಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಹಾಗೂ ಜಿಸಿಸಿ ಸಾರಥ್ಯದ ಸ್ನೇಹಧಾರ ಮಾಸಿಕವನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿತನುಡಿಗಳನ್ನಾಡಿದ SKSSF ಕೊಡಗು ಜಿಲ್ಲಾಧ್ಯಕ್ಷರಾದ ತಮ್ಲೀಕ್ ದಾರಿಮಿ ನೂತನ ಸಮಿತಿಗೆ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ರಝಾಕ್ ಫೈಝಿ ಶನಿವಾರಸಂತೆ ಭಾಗವಹಿಸಿದ್ದರು. ಸಿದ್ಧೀಕ್ ವಾಫಿ ಹೊಸತೋಟ ನೂತನ ಸಮಿತಿ ರಚನೆಯ ಉಸ್ತುವಾರಿಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ SKSSF ಸೋಮವಾರಪೇಟೆ ಶಾಖಾ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.