ಮಾಲೂರು (ವಿ.ಕೆ.ನ್ಯೂಸ್):
ಮಾಲೂರು ಪಟ್ಟಣ್ಣದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಕನ್ನಡಪರ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಾರಥಿಯಾದ ಎಂ.ವಿ.ಹನುಮಂತಯ್ಯನವರ ನೇತೃತ್ವದಲ್ಲಿ ಎಂ.ಇ.ಎಸ್ ಹಾಗೂ ಶಿವಸೇನೆ ಪುಂಡಾಟಿಕೆ ಹಾಗೂ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮಾಲೂರಿನ ದಂಡಾಧಿಕಾರಿಗಳಾದ ರಮೇಶ್ ರವರಿಗೆ ಮನವಿ ನೀಡಲಾಯಿತು.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಅಧ್ಯಕ್ಷರಾದ ಶಿವಾರ ನಾಣಿ, ಪ್ರಧಾನ ಕಾರ್ಯದರ್ಶಿ ದಯಾನಂದ್, ಹಿರಿಯ ಹೋರಾಟಗಾರ ಕಲಾವಿದ ಸ್ವಾಮಿ, ಕರವೇ (ಹೆಚ್.ಶಿವರಾಮೇಗೌಡ ಸಾರಥ್ಯ) ತಾಲ್ಲೂಕು ಅಧ್ಯಕ್ಷ ದೊಡ್ಡಕಲ್ಲಹಳ್ಳಿ ಮಂಜುನಾಥ್, ಗೌರವ ಅಧ್ಯಕ್ಷ ಆನೇಪುರ ದೇವರಾಜ್, ದಲಿತ ಸಿಂಹ ಸೇನೆಯ ತಿಪ್ಪಸಂದ್ರ ಶ್ರೀನಿವಾಸ್, ಕರವೇ ಯುವ ಸೇನೆಯ ತಾಲ್ಲೂಕು ಅಧ್ಯಕ್ಷರಾದ ಎಸ್.ಎಂ.ರಾಜು, ಅನೇಕ ಕನ್ನಡಪರ, ರೈತಪರ ಸಂಘಟನೆ ಮುಖಂಡರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.