ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ) :ಬ್ರಹ್ಮಾವರ ತಾಲೂಕು ಕೋಟತಟ್ಟುವಿನ ಕೊರಗ ಕಾಲೋನಿಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ಕೊರಗರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಘಟನೆಯ ಕುರಿತಂತೆ ,ಶನಿವಾರ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿದರು.
ಘಟನೆ ಬಗ್ಗೆ ವಿವರವನ್ನು ಪಡೆದುಕೊಂಡ ಸಚಿವರು ತನಿಖೆಯನ್ನು ಸಿ.ಓ.ಡಿ ಗೆ ವಹಿಸುವುದಾಗಿ ತಿಳಿಸಿದರು.ಪೊಲೀಸರಿಂದ ಲಾಠಿಚಾರ್ಜ್ ಒಳಗಾಗಿ ಗಾಯಗೊಂಡ 6 ಜನರಿಗೆ 2 ಲಕ್ಷ ರೂ ಗಳ ಪರಿಹಾರವನ್ನು ಘೋಷಣೆ ಮಾಡಿ, ಅದರಲ್ಲಿ ಮೊದಲ ಹಂತದ ಪರಿಹಾರವಾಗಿ 50000 ರೂ ಗಳ ಚೆಕ್ ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ವಿಷ್ಣುವರ್ಧನ್, ಕೊರಗ ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.