ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಟ್ವಿಟರ್ ನಲ್ಲಿ ಭಾರತದಲ್ಲೇ ನಂ.1 ಟ್ರೆಂಡಿಂಗ್ ಆಗಿದೆ.
ಸಂವಿಧಾನದ 9 ಹಾಗೂ 21 ನೇ ವಿಧಿಯನ್ನು ಗಾಳಿಗೆ ತೂರಿ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯನ್ನುಂಟುಮಾಡಿದ ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ಸಮಿತಿಯ ವಿರುಧ್ದ ಕ್ರಮ ಕೈಗೊಳ್ಳಬೇಕು , ಹಿಜಾಬ್ ಹಾಕಿದ ಕಾರಣಕ್ಕಾಗಿ ತರಗತಿಯಿಂದ ಹೊರದಬ್ಬಿದ ವಿದ್ಯಾರ್ಥಿಗಳನ್ನು ತರಗತಿಗೆ ಸೇರಿಸಬೇಕೆಂದು ಟ್ಟಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗಾಗಲೇ ಈ ಘಟನೆಯ ಕುರಿತು ರಾಷ್ಟ್ರಮಟ್ಟದ ಹಲವಾರು ಮಾಧ್ಯಮಗಳು ವರದಿ ಮಾಡಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.