(www.vknews.com) ; ಸಾಲೆತ್ತೂರು:ಜ.8: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ಮದುವೆಯ ನಂತರದ ಕಾರ್ಯಕ್ರಮವೊಂದರಲ್ಲಿ ವರನ ಅನಪೇಕ್ಷಿತ ವೇಷಭೂಷಣ ಅದು ಒಂದು ವರ್ಗಕ್ಕೆ ನೋವುಂಟು ಮಾಡಿರುವುದರಿಂದ ಎಸ್.ಡಿ.ಪಿ.ಐ ಖಂಡಿಸುತ್ತದೆ.
ಅದೇ ರೀತಿ ಈ ವಿಚಾರವಾಗಿ ಸಂಘ ಪರಿವಾರದ ಗೂಂಡಾಗಳು ವಧುವಿನ ಮನೆಗೆ ನುಗ್ಗಲು ಪ್ರಯತ್ನಿಸಿರುವುದು ಹಾಗೂ ಕೋಮು ಘರ್ಷಣೆ ನಡೆಸಲು ಯತ್ನಿಸುವುದಾದರೆ ಖಂಡಿತವಾಗಿ ಕೈ ಕಟ್ಟಿ ನಿಲ್ಲಲು ಸಾಧ್ಯವಿಲ್ಲ. ಶಾಂತಿ ಸೌಹಾರ್ದದಿಂದ ಬದುಕುತ್ತಿರುವ ಈ ಗ್ರಾಮದ ಜನತೆಯ ನಡುವೆ ಕೋಮು ಸಾಮರಸ್ಯ ಕದಡಲು ಪ್ರಯತ್ನಿಸುತ್ತಿರುವ ಭಜರಂಗದಳದ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಜರಗಿಸಬೇಕೆಂದು ಎಸ್.ಡಿ.ಪಿ.ಐ ಕೊಳ್ನಾಡು ಬ್ಲಾಕ್ ಅಧ್ಯಕ್ಷರಾದ ಬಶೀರ್ ಕೊಳ್ನಾಡು ಆಗ್ರಹಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.