ಶ್ರೀನಿವಾಸಪುರ(ವಿಶ್ವ ಕನ್ನಡಿಗ ನ್ಯೂಸ್): ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಕಾರಂಗಿ – ಕನಂಪಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಈ ಎರಡೂ ಗ್ರಾಮಗಳನ್ನು ಸಂಪರ್ಕಿಸುವ ೪.೫ ಕಿ.ಮೀ ದೂರದ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ರೂ.೩ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚರಂಡಿ ಹಾಗೂ ಮೋರಿಗಳ ನಿರ್ಮಾಣ ಮಾಡುವುದರಿಂದ ಸ್ವಚ್ಛ ಪರಿಸರ ಇರಲು ಸಾಧ್ಯವಾಗುತ್ತದೆ.
ನಾಗರಿಕರು ತಮ್ಮ ಗ್ರಾಮಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಂಭವನೀಯ ರೋಗ ರುಜಿನಗಳಿಂದ ಪಾರಾಗಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪಿಡಿಒ ಮಂಜುನಾಥ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಪ್ರಥಮ ದರ್ಜೆ ಗುತ್ತಿಗೆದಾರ ಎಸ್.ಜಿ.ವಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದಸ್ವಾಮಿ, ತಾಲ್ಲೂಕು ಪಂಚಾಯಿ ತಿ ಮಾಜಿ ಅಧ್ಯಕ್ಷ ಎಸ್.ವಿ.ಸುಧಾಕರ್, ಸದಸ್ಯ ಕೆ.ಕೆ.ಮಂಜು, ಗ್ರಾಮ ಪಂಚಾಯಿತಿ ಅದ್ಯಕ್ಷ ರಮೇಶ್, ಸದಸ್ಯ ಹರೀಶ್ ರೆಡ್ಡಿ, ಮುಖಂಡರಾದ ಎಂ.ವಿ.ನಾರಾಯಣ ಸ್ವಾಮಿ,ಕೃಷ್ಣಾರೆಡ್ಡಿ, ಗುರಪ್ಪ, ಶ್ರೀನಾಥ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳಾದ ಎಂ.ಕೆ.ಹುಸೇನ್ ಸಾಬ್, ಚಂದ್ರಶೇಖರ್, ಎಂಜಿನಿಯರ್ಗಳಾದ ಎಲ್.ಎಂ.ನಾಗರಾಜ್, ಗೋವಿಂದಪ್ಪ ಇದ್ದರು.ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.